ದೇಶ

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ

ಟಿಟಿಡಿ ಮಂಡಳಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಘಟನೆಗೆ ಕ್ಷಮೆಯಾಚಿಸಿ ಟ್ರಸ್ಟ್ ಈ ನಿಟ್ಟಿನಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ತಿರುಪತಿ: ತಿರುಪತಿಯಲ್ಲಿ ಆರು ಜೀವಗಳನ್ನು ಬಲಿ ಪಡೆದ ಕಾಲ್ತುಳಿತ ಪ್ರಕರಣಕ್ಕೆ ತೀವ್ರ ಜನದಟ್ಟಣೆ ಕಾರಣವಾಯಿತು ಎಂದು ತಿರುಮಲ ತಿರುಪತಿ ದೇವಸ್ಥಾನಗಳ (TTD) ಅಧ್ಯಕ್ಷರು ಹೇಳಿದ್ದಾರೆ.

ತಿರುಪತಿಯ ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಸುದ್ದಿಗಾರರೊಂದಿಗೆ ಮಾತನಾಡಿ, ಗಾಯಾಳುಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದೇವೆ.

ಇದೊಂದು ತೀರಾ ದುರದೃಷ್ಟಕರ ಘಟನೆ. ವಿವರವಾದ ವರದಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲಿದ್ದಾರೆ ಎಂದು ಹೇಳಿದರು. ಕಾಲ್ತುಳಿತಕ್ಕೆ ಕಾರಣ (ಕಾಲ್ತುಳಿತ) ಮಿತಿಮೀರಿದ ಜನಸಂದಣಿ. ಇದು ದುರದೃಷ್ಟಕರ ಘಟನೆ. ನಾಳೆ ಸಿಎಂ ಎಲ್ಲವನ್ನೂ ಹೇಳಲಿದ್ದಾರೆ, ಇಂದು ಸಂಪೂರ್ಣ ವರದಿ ಬರಲಿದೆ. ಒಟ್ಟು ಆರು ಜನರು ಮೃತಪಟ್ಟಿದ್ದಾರೆ. ಕೆಲವರು ತಮಿಳುನಾಡಿನವರು ಮತ್ತು ಕೆಲವರು ಆಂಧ್ರಪ್ರದೇಶದವರು. ಇಲ್ಲಿಯವರೆಗೆ ಒಂದು ಶವವನ್ನು ಗುರುತಿಸಲಾಗಿದೆ, ಇನ್ನೂ ಐದು ಜನರನ್ನು ಗುರುತಿಸಬೇಕಾಗಿದೆ ಎಂದರು.

ಟಿಟಿಡಿ ಮಂಡಳಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಘಟನೆಗೆ ಕ್ಷಮೆಯಾಚಿಸಿ ಟ್ರಸ್ಟ್ ಈ ನಿಟ್ಟಿನಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಮಂಡಳಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ, ಕಾಲ್ತುಳಿತದಲ್ಲಿ ಸುಮಾರು 40 ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT