ಪವನ್ ಕಲ್ಯಾಣ್, TTD ಮುಖ್ಯಸ್ಥ ಬಿ.ಆರ್. ನಾಯ್ಡು ಸಾಂದರ್ಭಿಕ ಚಿತ್ರ  
ದೇಶ

ತಿರುಪತಿ ಕಾಲ್ತುಳಿತ ಘಟನೆ: ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ, ಪವನ್ ಕಲ್ಯಾಣ್ ಗೆ TTD ಮುಖ್ಯಸ್ಥ ತಿರುಗೇಟು!

ಕ್ಷಮೆ ಕೋರುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ. ಯಾರೋ ಏನೋ ಹೇಳ್ತಾರೆ ಅಂತಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ.

ತಿರುಪತಿ: ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಮುಖ್ಯಸ್ಥ ಬಿ.ಆರ್. ನಾಯ್ಡು ಶುಕ್ರವಾರ ನೀಡಿದ್ದಾರೆ.

ಜನವರಿ 8 ರಂದು ವಿಶೇಷ ದರ್ಶನದ ಟಿಕೆಟ್ ವಿತರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಆರು ಮಂದಿ ಸಾವನ್ನಪ್ಪಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಕ್ಷಮೆ ಕೋರಬೇಕು ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸಲಹೆ ನೀಡಿದ್ದರು.

ಈ ಸಲಹೆಗೆ ತಿರುಗೇಟು ನೀಡಿರುವ ಬಿ.ಆರ್. ನಾಯ್ಡು, ಕ್ಷಮೆ ಕೋರುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ. ಯಾರೋ ಏನೋ ಹೇಳ್ತಾರೆ ಅಂತಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಕಾಲ್ತುಳಿತ ಘಟನೆಯಲ್ಲಿ ತಪ್ಪಿಲ್ಲದಿದ್ದರೂ ಟಿಟಿಡಿ ಮಂಡಳಿ ಸದಸ್ಯರು ಭಕ್ತರ ಕ್ಷಮೆಯಾಚಿಸಿದ್ದಾರೆ. ಏನೋ ತಪ್ಪಾಗಿದೆ. ಹೇಗೆ ಕಾಲ್ತುಳಿತ ಸಂಭವಿಸಿತು. ಅದಕ್ಕೆ ಯಾರದು ತಪ್ಪು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಧ್ಯಮದವರಿಗೆ ತಿಳಿಸಿದರು.

ಗುರುವಾರ ತಿರುಪತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪವನ್ ಕಲ್ಯಾಣ್, TTD ಮುಖ್ಯಸ್ಥ ಬಿ.ಆರ್. ನಾಯ್ಡು, ಮಂಡಳಿ ಸದಸ್ಯರು, ಎಕ್ಸಿಕ್ಯೂಟಿವ್ ಆಫೀಸರ್ ಜೆ. ಶ್ಯಾಮಲಾ ರಾವ್ ಮತ್ತು ಹೆಚ್ಚುವರಿ ಎಕ್ಸಿಕ್ಯೂಟಿವ್ ಆಫೀಸರ್ ಕಾಲ್ತುಳಿತ ಸಂತ್ರಸ್ತರ ಕ್ಷಮೆ ಕೋರುವುದು ಬಿಟ್ಟರೇ ಬೇರೆ ಆಯ್ಕೆಗಳಿಲ್ಲ ಎಂದು ಹೇಳಿದ್ದರು. ಭಕ್ತರ ದಟ್ಟಣೆ ನಿಯಂತ್ರಿಸುವಲ್ಲಿ ವಿಫಲತೆ ಹಿನ್ನೆಲೆಯಲ್ಲಿ ಟಿಟಿಡಿ ಮುಖ್ಯಸ್ಥರು ಮತ್ತಿತರರು ಕಾಲ್ತುಳಿತ ಸಂತ್ರಸ್ತರು ಹಾಗೂ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗ ಕುಸಿತ; ಮಳೆಯಲ್ಲಿ ಕೊಚ್ಚಿಹೋದ 7 ಸಾವಿರ ಕೋಟಿ!

ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು

ರಾಮನಗರ: ಹೋಂ ಸ್ಟೇ, ರೆಸಾರ್ಟ್‌ ಹೆಸರಲ್ಲಿ ಹೈಟೆಕ್ ಸೆಕ್ಸ್​ ದಂಧೆ; 10 ಯುವತಿಯರ ರಕ್ಷಣೆ, 52 ಜನರ ಬಂಧನ

ವಿಜಯಪುರದಲ್ಲಿ ಬಿಎಲ್‌ಡಿಇ-ಅಕ್ಷಯಕಲ್ಪ ವೈಜ್ಞಾನಿಕ ತರಬೇತಿ: ರೈತರಿಗೆ ಲಾಭದಾಯಕವಾದ ಹೈನುಗಾರಿಕೆ ಉದ್ಯಮ

ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್