'ಮಾ ಕಿ ರಸೋಯಿ' ಉದ್ಘಾಟಿಸಿದ ಸಿಎಂ ಯೋಗಿ 
ದೇಶ

Maha Kumbh 2025: ಕುಂಭ ಮೇಳಕ್ಕೆ ಬರುವವರಿಗೆ 9 ರುಪಾಯಿಗೆ ಫುಲ್ ಊಟ: 'ಮಾ ಕಿ ರಸೋಯಿ' ಉದ್ಘಾಟಿಸಿದ ಸಿಎಂ ಯೋಗಿ

ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಸ್ಪತ್ರೆಯ ಸೌಲಭ್ಯಗಳನ್ನು ಪರಿಶೀಲಿಸಿದರು.

ಪ್ರಯಾಗ್‌ರಾಜ್‌: ಮಹಾ ಕುಂಭ ಮೇಳಕ್ಕೆ ಬರುವವರಿಗೆ ಕೇವಲ 9 ರೂ.ಗೆ ಫುಲ್ ಊಟ ನೀಡುವ 'ಮಾ ಕಿ ರಸೋಯಿ' ಎಂಬ ಸಮುದಾಯ ಅಡುಗೆಮನೆಯನ್ನು ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉದ್ಘಾಟಿಸಿದರು.

ಈ ಸಮುದಾಯ ಅಡುಗೆಮನೆಯನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಯಲ್ಲಿ ನಂದಿ ಸೇವಾ ಸಂಸ್ಥಾನ ನಿರ್ವಹಿಸುತ್ತದೆ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರನ್ನು ಬೆಂಬಲಿಸಲು ಉತ್ತರ ಪ್ರದೇಶ ಸರ್ಕಾರ ಈ ಯೋಜನೆ ಘೋಷಿಸಿದೆ.

ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಸ್ಪತ್ರೆಯ ಸೌಲಭ್ಯಗಳನ್ನು ಪರಿಶೀಲಿಸಿದರು ಮತ್ತು ಉಪಕ್ರಮದ ಉದ್ಘಾಟನೆಯ ಸಂದರ್ಭದಲ್ಲಿ ಹಾಜರಿದ್ದವರಿಗೆ ವೈಯಕ್ತಿಕವಾಗಿ ಆಹಾರವನ್ನು ನೀಡಿದರು.

ಮಹಾಕುಂಭ ಮೇಳದ ಸಮಯದಲ್ಲಿ ಭಕ್ತರು, ನಿವಾಸಿಗಳಿಗೆ ಕೈಗೆಟುಕುವ ಮತ್ತು ಪೌಷ್ಟಿಕಾಂಶದ ಊಟವನ್ನು ಖಾತ್ರಿಪಡಿಸುವಲ್ಲಿ ಈ ಯೋಜನೆಯು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

"ನಂದಿ ಸೇವಾ ಸಂಸ್ಥಾನವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳನ್ನು ಬೆಂಬಲಿಸಲು ಈ ಉಪಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮದಡಿಯಲ್ಲಿ, ಜನರು ಕೇವಲ 9 ರೂ.ಗೆ ಫುಲ್ ಊಟವನ್ನು ಆನಂದಿಸಬಹುದು. ಊಟದಲ್ಲಿ ದಾಲ್, ನಾಲ್ಕು ರೊಟ್ಟಿ, ತರಕಾರಿಗಳು, ಅನ್ನ, ಸಲಾಡ್ ಮತ್ತು ಸಿಹಿತಿಂಡಿ ಸೇರಿವೆ" ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಉದ್ಘಾಟನೆಯ ನಂತರ, ಕೈಗಾರಿಕಾ ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತಾ ಅವರು, ಮುಖ್ಯಮಂತ್ರಿಯನ್ನು ಅಡುಗೆಮನೆಗೆ ಕರೆದುಕೊಂಡು ಹೋಗಿ, ಆಹಾರದ ಗುಣಮಟ್ಟ, ನೈರ್ಮಲ್ಯ ಮಾನದಂಡಗಳು ಮತ್ತು ಇತರ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT