ರಾಹುಲ್ ಗಾಂಧಿ 
ದೇಶ

ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು

ರಾಹುಲ್ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ನಂತರ ಸಂಸದ/ಶಾಸಕರ ವಿಶೇಷ ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಆಧಾರದ ಮೇಲೆ ಜಾಮೀನು ನೀಡಿದೆ.

ಪುಣೆ: ಹಿಂದುತ್ವವಾದಿ ವಿ ಡಿ ಸಾವರ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ದಾಖಲಿಸಲಾದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಪುಣೆ ವಿಶೇಷ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ನಂತರ ಸಂಸದ/ಶಾಸಕರ ವಿಶೇಷ ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಆಧಾರದ ಮೇಲೆ ಜಾಮೀನು ನೀಡಿದೆ.

ಹಿರಿಯ ಕಾಂಗ್ರೆಸ್ ನಾಯಕ ಮೋಹನ್ ಜೋಶಿ ಅವರು ನ್ಯಾಯಾಲಯದ ಮುಂದೆ ಶ್ಯೂರಿಟಿಯಾಗಿ ನಿಂತರು.

ರಾಹುಲ್ ಗಾಂಧಿಯವರ ಪರವಾಗಿ ವಾದ ಮಂಡಿಸಿದ ವಕೀಲ ಮಿಲಿಂದ್ ಪವಾರ್, ನ್ಯಾಯಾಲಯವು ಕಾಂಗ್ರೆಸ್ ನಾಯಕನಿಗೆ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡಿದೆ ಎಂದು ತಿಳಿಸಿದರು.

ಈ ಪ್ರಕರಣವನ್ನು ಈಗ ಫೆಬ್ರವರಿ 18 ರಂದು ವಿಚಾರಣೆ ನಡೆಸಲಾಗುವುದು ಎಂದು ಪವಾರ್ ಹೇಳಿದ್ದಾರೆ.

2023 ರ ಮಾರ್ಚ್‌ನಲ್ಲಿ ಲಂಡನ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಸಾವರ್ಕರ್ ಅವರು ತಮ್ಮ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಖುಷಿಪಟ್ಟಿದ್ದಾಗಿ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಾವರ್ಕರ್ ಅವರ ಮೊಮ್ಮಗ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT