ಕಾನ್ಫುರ ಕಮಿಷನರ್ ಕೆ. ವಿಜಯೇಂದ್ರ ಪಾಂಡಿಯನ್ 
ದೇಶ

ಕನ್ನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಛಾವಣಿ ಕುಸಿತ; 28 ಜನರ ರಕ್ಷಣೆ, ಆರು ಮಂದಿಗೆ ಗಂಭೀರ ಗಾಯ

ಇಲ್ಲಿಯವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇನ್ನೂ ಕೆಲ ಗಂಟೆಗಳಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಲಖನೌ: ಉತ್ತರ ಪ್ರದೇಶದ ಕನ್ನೌಜ್‌ನ ರೈಲು ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ನಿರ್ಮಾಣ ಹಂತದ ಛಾವಣಿ ಕುಸಿತದಿಂದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಸುಮಾರು 28 ಜನರನ್ನು ರಕ್ಷಿಸಲಾಗಿದೆ. ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾನ್ಫುರ ಕಮಿಷನರ್ ಕೆ. ವಿಜಯೇಂದ್ರ ಪಾಂಡಿಯನ್ ತಿಳಿಸಿದ್ದಾರೆ.

ಇಲ್ಲಿಯವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇನ್ನೂ ಕೆಲವು ಗಂಟೆಗಳಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಘಟನಾ ಸ್ಥಳದಲ್ಲಿ ಶ್ವಾನ ದಳದ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ರಾಜ್ಯ ಸಚಿವ ಅಸೀಮ್ ಅರುಣ್ ಪ್ರಕಾರ, 23 ಜನರನ್ನು ರಕ್ಷಿಸಲಾಗಿದ್ದು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಖನೌಗೆ ರವಾನಿಸಲಾಗಿದೆ.

ನಿಲ್ದಾಣದಲ್ಲಿ ಸೌಂದರ್ಯೀಕರಣ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಅವಘಡ ನಡೆದ ಸಮಯದಲ್ಲಿ ಸುಮಾರು 30–35 ಕಾರ್ಮಿಕರು ಸ್ಥಳದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?