ಕಪಿಲ್ ಮಿಶ್ರಾ  
ದೇಶ

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 29 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

70 ವಿಧಾನಸಭಾ ಸ್ಥಾನಗಳ ಪೈಕಿ ಉಳಿದ 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ಸಂಜೆ ಸಭೆ ಸೇರಿತ್ತು.

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ 29 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆಗೊಳಿಸಿದೆ. ಕಪಿಲ್ ಮಿಶ್ರಾ ಮತ್ತು ಹರೀಶ್ ಖುರಾನಾ ಅವರನ್ನು ಕ್ರಮವಾಗಿ ಕರವಾಲ್ ನಗರ ಮತ್ತು ಮೋತಿ ನಗರದಿಂದ ಕಣಕ್ಕಿಳಿಸಿದೆ.

ನರೇಲಾದಿಂದ ರಾಜ್ ಕರಣ್ ಖತ್ರಿ, ತಿಮಾರ್‌ಪುರದಿಂದ ಸೂರ್ಯ ಪ್ರಕಾಶ್ ಖತ್ರಿ, ಮುಂಡ್ಕಾದಿಂದ ಗಜೇಂದ್ರ ದಾರಾಲ್, ಕಿರಾರಿಯಿಂದ ಬಜರಂಗ್ ಶುಕ್ಲಾ, ಸುಲ್ತಾನ್‌ಪುರ ಮಜ್ರಾದಿಂದ ಕರಣ್ ಸಿಂಗ್ ಕರ್ಮಾ, ಶಕುರ್ ಬಸ್ತಿಯಿಂದ ಕರ್ನೈಲ್ ಸಿಂಗ್ ಮತ್ತು ತ್ರಿನಗರದಿಂದ ತಿಲಕ್ ರಾಮ್ ಗುಪ್ತಾ ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.

ಸದರ್ ಬಜಾರ್‌ನಿಂದ ಮನೋಜ್ ಕುಮಾರ್ ಜಿಂದಾಲ್, ಚಾಂದಿನಿ ಚೌಕದಿಂದ ಸತೀಶ್ ಜೈನ್, ಮಟಿಯಾ ಮಹಲ್‌ನಿಂದ ದೀಪ್ತಿ ಇಂದೋರಾ, ಮಾದಿಪುರದಿಂದ ಊರ್ಮಿಳಾ ಕೈಲಾಶ್ ಗಂಗ್ವಾಲ್, ಹರಿನಗರದಿಂದ ಶ್ಯಾಮ್ ಶರ್ಮಾ, ತಿಲಕ್ ನಗರದಿಂದ ಶ್ವೇತಾ ಸೈನಿ ಸೇರಿದಂತೆ ಇತರ ಹಲವು ಮಂದಿಗೆ ಬಿಜೆಪಿ ಟಿಕೆಟ್ ನೀಡಿದೆ.

70 ವಿಧಾನಸಭಾ ಸ್ಥಾನಗಳ ಪೈಕಿ ಉಳಿದ 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ಸಂಜೆ ಸಭೆ ಸೇರಿತ್ತು. ಇಂದು 29 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.

ಈ ಹಿಂದೆ ಜನವರಿ 4 ರಂದು 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರನ್ನು ನವದೆಹಲಿ ಕ್ಷೇತ್ರದಿಂದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಮುಖ್ಯಮಂತ್ರಿ ಅತಿಶಿ ಸ್ಪರ್ಧಿಸುತ್ತಿರುವ ಕಲ್ಕಾಜಿಯಿಂದ ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

SCROLL FOR NEXT