ನಟ ಅಲ್ಲು ಅರ್ಜುನ್ 
ದೇಶ

ಪುಷ್ಪ 2 ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್!

ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅವರಿಗೆ ಅನುಮತಿ

ಹೈದರಾಬಾದ್: ಪುಷ್ಪ 2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಥಳೀಯ ನ್ಯಾಯಾಲಯವೊಂದು ಅವರ ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅವರಿಗೆ ಅನುಮತಿ ನೀಡಿದೆ.

ಪ್ರತಿ ಟ್ರಿಪ್‌ಗೆ ಅವರ ಪ್ರಯಾಣದ ವೇಳಾಪಟ್ಟಿಯನ್ನು SHO ಗೆ ತಿಳಿಸಲು ಮತ್ತು ಚಾರ್ಜ್ ಶೀಟ್ ಸಲ್ಲಿಸುವವರೆಗೆ ವಿದೇಶದಲ್ಲಿ ಅವರು ತಂಗಿರುವ ಸ್ಥಳದ ವಿವರಗಳನ್ನು ಒದಗಿಸುವಂತೆ ನಿರ್ದೇಶಿಸಲಾಗಿದೆ. ಉಳಿದ ಜಾಮೀನು ಷರತ್ತುಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಅಲ್ಲು ಅರ್ಜುನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಜನವರಿ 3 ರಂದು ಅಲ್ಲು ಅರ್ಜುನ್‌ಗೆ ನಿಯಮಿತ ಜಾಮೀನು ನೀಡುವಾಗ ಪ್ರತಿ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ನಡುವೆ ಎರಡು ತಿಂಗಳವರೆಗೆ ಅಥವಾ ಚಾರ್ಜ್‌ಶೀಟ್ ಸಲ್ಲಿಕೆಯಾಗುವವರೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

ಕೋರ್ಟ್ ಅನುಮತಿ ಪಡೆಯದೆ ದೇಶ ತೊರೆಯದಂತೆ ನಿರ್ಬಂಧಿಸಿತ್ತು. ಅಲ್ಲದೇ ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಯಲ್ಲಿ ಮಧ್ಯಪ್ರವೇಶಿಸುವುದು ಅಥವಾ ಯಾವುದೇ ರೀತಿಯಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದನ್ನು ತಡೆಯುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!