ಸಾಂದರ್ಭಿಕ ಚಿತ್ರ 
ದೇಶ

ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ; ಪೂರೈಸಲಾಗದ್ದಕ್ಕೆ ಮನನೊಂದು ಅಪ್ಪನೂ ನೇಣಿಗೆ ಶರಣು!

ಮಗನ ಸ್ಮಾರ್ಟ್‌ಫೋನ್ ಆಸೆಯನ್ನು ಈಡೇರಿಸಲು ಸಾಧ್ಯವಾಗದೆ, ರೈತ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅದೇ ಹಗ್ಗದಿಂದಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ನಾಂದೇಡ್‌: 16 ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತನಾಗಿರುವ ತಂದೆ ಮಗನ ಆಸೆ ಈಡೇರಿಸಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯ ಬಿಲೋಲಿ ತಹಸಿಲ್‌ನ ಮಿನಕಿಯಲ್ಲಿ ರೈತನೊಬ್ಬ ತನ್ನ ಮಗನಿಗೆ ಸ್ಮಾರ್ಟ್‌ಫೋನ್ ಖರೀದಿಸಲು ಸಾಧ್ಯವಾಗದ ಕಾರಣ ಮಗನೊಂದಿಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗನ ಸ್ಮಾರ್ಟ್‌ಫೋನ್ ಆಸೆಯನ್ನು ಈಡೇರಿಸಲು ಸಾಧ್ಯವಾಗದೆ, ರೈತ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅದೇ ಹಗ್ಗದಿಂದಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಗುರುವಾರ ಬೆಳಗ್ಗೆ ಹತ್ತನೇ ತರಗತಿಯ ವಿದ್ಯಾರ್ಥಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವುದನ್ನು ನೋಡಿದ ತಂದೆ, ಅದೇ ಮರಕ್ಕೆ ತಾನು ನೇಣು ಬಿಗಿದುಕೊಂಡಿದ್ದಾನೆ ಎಂದು TOI ವರದಿ ಮಾಡಿದೆ.

ಮೂರು ಸಹೋದರರಲ್ಲಿ ಕಿರಿಯವನಾದ ಬಾಲಕ ಮಕರ ಸಂಕ್ರಾಂತಿಗೆ ತನ್ನ ಹಾಸ್ಟೆಲ್‌ನಿಂದ ಮನೆಗೆ ಬಂದಿದ್ದ. ತನ್ನ ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಮಾರ್ಟ್‌ಫೋನ್ ಕೊಡಿಸುವಂತೆ ತಂದೆಗೆ ಕೇಳಿಕೊಂಡಿದ್ದ. ಆದರೆ ಹಣದ ಸಮಸ್ಯೆಯಿಂದಾಗಿ ತಂದೆಗೆ ಮೊಬೈಲ್ ಖರೀದಿಸಲು ಸಾಧ್ಯವಾಗಿರಲಿಲ್ಲ.

ಈ ಸಂಬಂಧ ನಾಂದೇಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT