ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದ ಬಿಜಾಪುರದಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರ ಹತ್ಯೆ

ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆ ನಡೆಸಿದ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಜಿಲ್ಲಾ ಪಡೆಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಅವರು ಹೇಳಿದರು.

ಕಾರ್ಯಾಚರಣೆಯಲ್ಲಿ 'ಸಮವಸ್ತ್ರ' ಧರಿಸಿದ್ದ ಮೂವರು ನಕ್ಸಲರ ಮೃತದೇಹಗಳೊಂದಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಇಲ್ಲಿಯವರೆಗೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 12 ನಕ್ಸಲರ ಹತ್ಯೆಯಾಗಿದೆ.

ಜನವರಿ 6 ರಂದು ನಾರಾಯಣಪುರ-ದಂತೇವಾಡ-ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಮೂರು ದಿನಗಳ ಸುದೀರ್ಘ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಹತರಾಗಿದ್ದಾರೆ. ಇದೇ ದಿನ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಐಇಡಿಯೊಂದಿಗೆ ವಾಹನವನ್ನು ಸ್ಫೋಟಿಸಿದರು. ಈ ವೇಳೆ ಎಂಟು ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದರು.

ಜನವರಿ 9 ರಂದು ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ.

ಇದಕ್ಕೂ ಮುನ್ನ ಜನವರಿ 3 ರಂದು ರಾಯ್‌ಪುರ ವಿಭಾಗದಲ್ಲಿ ಬರುವ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರೊಬ್ಬರು ಹತರಾಗಿದ್ದರು.

ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್