ದೆಹಲಿ ಮುಖ್ಯಮಂತ್ರಿ ಅತಿಶಿ Photo | PTI
ದೇಶ

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 'ಕ್ರೌಡ್‌ಫಂಡಿಂಗ್ ಅಭಿಯಾನ' ಪ್ರಾರಂಭಿಸಿದ ದೆಹಲಿ ಸಿಎಂ ಅತಿಶಿ

ಡಿಸೆಂಬರ್‌ನಲ್ಲಿ ಎಎಪಿ ನಾಯಕ ಮತ್ತು ಜಂಗ್‌ಪುರದ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು.

ನವದೆಹಲಿ: ಮುಂಬರುವ ದಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮತ್ತು ಎಎಪಿ ಅಭ್ಯರ್ಥಿ ಅತಿಶಿ ಅವರು ಭಾನುವಾರ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಜನರು ತಮ್ಮ ಪಕ್ಷದ ಕೆಲಸ ಮತ್ತು ಪ್ರಾಮಾಣಿಕತೆಯ ರಾಜಕೀಯವನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ಹಣ ನೀಡಲು ಆನ್‌ಲೈನ್ ಲಿಂಕ್ ಅನ್ನು ಬಿಡುಗಡೆ ಮಾಡಿದರು. ಚುನಾವಣೆಯಲ್ಲಿ ಹೋರಾಡಲು ತನಗೆ 40 ಲಕ್ಷ ರೂ. ಅಗತ್ಯವಿದೆ ಎಂದು ಹೇಳಿದರು.

ಎಎಪಿ ಯಾವಾಗಲೂ ಸಾಮಾನ್ಯ ಜನರ ಸಣ್ಣ ದೇಣಿಗೆಯ ಸಹಾಯದಿಂದಲೇ ಚುನಾವಣೆಗಳನ್ನು ಎದುರಿಸುತ್ತಿದೆ. ಇದು ಕೆಲಸ ಮತ್ತು ಪ್ರಾಮಾಣಿಕತೆಯ ರಾಜಕೀಯವನ್ನು ಮುಂದುವರಿಸಲು ಸಹಾಯ ಮಾಡಿದೆ. 10 ವರ್ಷಗಳಿಂದ ದೆಹಲಿಯಲ್ಲಿ ಅಧಿಕಾರದಲ್ಲಿದ್ದರೂ ಎಎಪಿ ಬಳಿ ಒಂದೇ ಒಂದು ರೂ. ಭ್ರಷ್ಟಾಚಾರದ ಹಣವಿಲ್ಲ. ಹಿಂದಿನ ಚುನಾವಣೆಗಳಂತೆ ದೆಹಲಿ ಮತ್ತು ದೇಶದ ಜನರ ಬೆಂಬಲದೊಂದಿಗೆ ನಾವು ಚುನಾವಣೆಯನ್ನು ಎದುರಿಸುತ್ತೇವೆ ಎಂದು ದೆಹಲಿ ಸರ್ಕಾರದ ಈಗ ರದ್ದಾಗಿರುವ ಅಬಕಾರಿ ನೀತಿಯಿಂದಾಗಿ 2,026 ಕೋಟಿ ರೂಪಾಯಿ ನಷ್ಟವನ್ನು ಸಿಎಜಿ ಅಂದಾಜಿಸಿದೆ ಎಂಬ ಬಿಜೆಪಿಯ ಹೇಳಿಕೆಯ ಬಗ್ಗೆ ಕೇಳಿದಾಗ ಅವರು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರು ಈಗಾಗಲೇ ತಮ್ಮ ಸ್ನೇಹಿತರಿಂದ ಮತ್ತು ಸರ್ಕಾರಿ ಗುತ್ತಿಗೆಗಳ ಮೂಲಕ ಸಾಕಷ್ಟು ಹಣವನ್ನು ಸಂಗ್ರಹಿಸಿದ್ದಾರೆ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಹಣವನ್ನು ಸಂಗ್ರಹಿಸುವ ಅಗತ್ಯವಿಲ್ಲ ಎಂದರು.

ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಮರುಚುನಾವಣೆ ಬಯಸಿರುವ ಅತಿಶಿ, ಮಾಜಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಕಣಕ್ಕಿಳಿದಿದ್ದಾರೆ.

ಡಿಸೆಂಬರ್‌ನಲ್ಲಿ, ಹಿರಿಯ ಎಎಪಿ ನಾಯಕ ಮತ್ತು ಜಂಗ್‌ಪುರದ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ ಅವರು ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಚುನಾವಣಾ ಪ್ರಚಾರಕ್ಕಾಗಿ ಜನರಿಂದ ಹಣಕಾಸಿನ ನೆರವು ಕೋರಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT