ನಟರಾದ ರಾಣಾ, ವೆಂಕಟೇಶ್ ದಗ್ಗುಬಾಟಿ 
ದೇಶ

ಹೋಟೆಲ್ ಧ್ವಂಸ: ತೆಲುಗಿನ ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಪ್ರಕರಣ ದಾಖಲು!

ದಗ್ಗುಬಾಟಿ ಕುಟುಂಬವು 2014 ರಲ್ಲಿ ಫಿಲ್ಮ್‌ನಗರದ ಪ್ಲಾಟ್‌ನಲ್ಲಿ ಭೂಮಿಯನ್ನು ಲೀಸ್ ಗೆ ನೀಡಿತ್ತು.

ಹೈದರಾಬಾದ್: ತೆಲುಗಿನ ಜನಪ್ರಿಯ ನಟರಾದ ವೆಂಕಟೇಶ್ ದಗ್ಗುಬಾಟಿ, ಅವರ ಸೋದರಳಿಯ ಮತ್ತು ನಟ ರಾಣಾ ದಗ್ಗುಬಾಟಿಗೆ ಸಂಕಷ್ಟ ಎದುರಾಗಿದೆ.

ದಗ್ಗುಬಾಟಿ ಕುಟುಂಬದಿಂದ ಲೀಸ್ ಪಡೆದಿರುವ ಜಮೀನಿನಲ್ಲಿ ಉದ್ಯಮಿಯೊಬ್ಬರು ನಡೆಸುತ್ತಿದ್ದ ಹೋಟೆಲ್ ವೊಂದರ ಧ್ವಂಸಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಡಿ. ಸುರೇಶ್ ಸೇರಿದಂತೆ ವೆಂಕಟೇಶ್, ರಾಣಾ ದುಗ್ಗುಬಾಟಿಯ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಸಂಬಂಧ ಸ್ಥಳೀಯ ನ್ಯಾಯಾಲಯವೊಂದರ ನಿರ್ದೇಶನದ ನಂತರ ಕ್ರಿಮಿನಲ್ ಪಿತೂರಿ, ಮನೆ ಅತಿಕ್ರಮಣ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಜನವರಿ 11 ರಂದು ಫಿಲ್ಮ್‌ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ದೂರುದಾರ BRS ಶಾಸಕರ ಖರೀದಿಗೆ ಪ್ರಯತ್ನಿಸಿದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. 2022ರ ಅಕ್ಟೋಬರ್ ನಲ್ಲಿ ಬಂಧಿಸಲಾಗಿತ್ತು. ಬಳಿಕ ಅವರಿಗೆ ಜಾಮೀನು ಮಂಜೂರಾಗಿತ್ತು. ದಗ್ಗುಬಾಟಿ ಕುಟುಂಬವು 2014 ರಲ್ಲಿ ಫಿಲ್ಮ್‌ನಗರದ ಪ್ಲಾಟ್‌ನಲ್ಲಿ ಭೂಮಿಯನ್ನು ಲೀಸ್ ಗೆ ನೀಡಿತ್ತು. ನೋಂದಾಯಿತ ಗುತ್ತಿಗೆ ಪತ್ರ ನೀಡಿದ ನಂತರ ಅಲ್ಲಿ ಹೋಟೆಲ್ ಪ್ರಾರಂಭಿಸಲಾಗಿತ್ತು ಎಂದು ದೂರುದಾರರು ಹೇಳಿದ್ದಾರೆ.

ಗುತ್ತಿಗೆ ಪತ್ರ (ಲೀಸ್ ಡೀಡ್) ಅವಧಿ ಇನ್ನೂ ಮುಗಿಯದ ಕಾರಣ ವೆಂಕಟೇಶ್ ಮತ್ತಿತರರು ಅಲ್ಲಿಂದ ನಮ್ಮನ್ನು ತೆರವುಗೊಳಿಸಲು ಪ್ರಯತ್ನಿಸಿದರು. ನಂತರ ಅವರ ವಿರುದ್ಧ ತಡೆಯಾಜ್ಞೆಗಾಗಿ ಸಿಟಿ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದು, ವಿಚಾರಣೆ ಇನ್ನೂ ಬಾಕಿಯಿದೆ. ಹೀಗಿದ್ದರೂ ಆರೋಪಿಗಳು ಕೆಲವು ಸಮಾಜವಿರೋಧಿಗಳ ಜೊತೆ ಸೇರಿ ಜನವರಿ 11 ರಂದು ಹೋಟೆಲ್ ನೆಲಸಮಗೊಳಿಸಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.

ನಂತರ ದೂರುದಾರ ನಾಂಪಲ್ಲಿ ಕೋರ್ಟ್ ಮೊರೆಹೋಗಿದ್ದು, ಪೊಲೀಸರು ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಅದರಂತೆ ಜನವರಿ 11 ರಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT