ನರೇಂದ್ರ ಮೋದಿ 
ದೇಶ

ಯುವಜನತೆಯ ಬಲ ಭಾರತವನ್ನು ಅಭಿವೃದ್ಧಿಶೀಲ ದೇಶವನ್ನಾಗಿ ಮಾಡುತ್ತದೆ: ಪ್ರಧಾನಿ ಮೋದಿ

ಸ್ವಾಮಿ ವಿವೇಕಾನಂದರ ಜಯಂತಿಯಂದು ಆಯೋಜಿಸಲಾದ ವಿಕಸಿತ ಭಾರತ ಯುವ ನಾಯಕರ ಸಂವಾದದಲ್ಲಿ, ಪ್ರಧಾನಿ ಮೋದಿ ಅವರು ಯಾವುದೇ ದೇಶವು ಮುಂದುವರಿಯಲು ಪ್ರಮುಖ ಗುರಿಗಳನ್ನು ಹೊಂದಿಸಿಕೊಳ್ಳಬೇಕು ಎಂದು ಹೇಳಿದರು.

ನವದೆಹಲಿ: ದೇಶದ ಯುವ ಶಕ್ತಿಯು 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಭಿವೃದ್ಧಿಶೀಲ ಭಾರತವನ್ನು ಸಾಧಿಸುವ ನಮ್ಮ ಗುರಿಯನ್ನು ಜನರು ಕಷ್ಟಕರವೆಂದು ಭಾವಿಸಬಹುದು, ಆದರೆ ನಾವು ಅದನ್ನು ಶೀಘ್ರದಲ್ಲೇ ಸಾಧಿಸಬಹುದೆಂಬ ವಿಶ್ವಾಸ ನನಗಿದೆ. ದೊಡ್ಡ ಕನಸು ಕಾಣುವ ಮೂಲಕ ಮತ್ತು ಅವುಗಳಿಗೆ ಸಂಪೂರ್ಣವಾಗಿ ಸಮರ್ಪಿತರಾಗುವ ಮೂಲಕ, ನಾವು ಯಾವುದೇ ಕನಸನ್ನು ನನಸಾಗಿಸಬಹುದು ಎಂದು ಮೋದಿ ಹೇಳಿದರು.

ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಯುವಕರನ್ನು ಉದ್ದೇಶಿಸಿ ಮಾತನಾಡಿದ್ದು, ಸ್ವಾಮಿ ವಿವೇಕಾನಂದರ ಜಯಂತಿಯಂದು ಆಯೋಜಿಸಲಾದ ವಿಕಸಿತ ಭಾರತ ಯುವ ನಾಯಕರ ಸಂವಾದದಲ್ಲಿ, ಪ್ರಧಾನಿ ಮೋದಿ ಅವರು ಯಾವುದೇ ದೇಶವು ಮುಂದುವರಿಯಲು ಪ್ರಮುಖ ಗುರಿಗಳನ್ನು ಹೊಂದಿಸಿಕೊಳ್ಳಬೇಕು ಎಂದು ಹೇಳಿದರು. ಅವುಗಳನ್ನು ಸಾಧಿಸಲು ಕೆಲಸ ಮಾಡಬೇಕು. ಯಾವುದೇ ಗುರಿಯಿಲ್ಲದ ಜೀವನವು ನಿಷ್ಪ್ರಯೋಜಕವಾಗುತ್ತದೆ. ನಮ್ಮ ಜೀವನವನ್ನು ನಡೆಸಲು ನಮಗೆ ಸ್ಫೂರ್ತಿ ನೀಡುವುದು ಗುರಿಗಳೇ. ಯುವಕರು ಮಹತ್ವಾಕಾಂಕ್ಷೆಯ ಗುರಿಗಳನ್ನು ಹೊಂದಿಸಿಕೊಂಡು ನಂತರ ಅವುಗಳನ್ನು ಸಾಧಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು. ಇಂದು ನಮ್ಮ ಭಾರತ ಸರ್ಕಾರ ಇದನ್ನೇ ಮಾಡುತ್ತಿದೆ. ನಾವು ನಮ್ಮ ಹೆಚ್ಚಿನ ಗುರಿಗಳನ್ನು ಸಮಯಕ್ಕಿಂತ ಮುಂಚಿತವಾಗಿಯೇ ಸಾಧಿಸುತ್ತೇವೆ ಎಂದರು.

ದೇಶದ ಯುವ ಜನಸಂಖ್ಯೆಯ ಶಕ್ತಿ ಬಗ್ಗೆ ಮಾತನಾಡಿದ ಪ್ರಧಾನಿ, ಯುವಕರು ಯೋಚಿಸಿದರೆ ವಿಕಸಿತ ಭಾರತದ ಗುರಿಯನ್ನು ಶೀಘ್ರದಲ್ಲೇ ಸಾಧಿಸಲಾಗುತ್ತದೆ ಎಂದು ಹೇಳಿದರು. ಅಭಿವೃದ್ಧಿ ಹೊಂದಿದ ಭಾರತದ ಭಾವನೆಯು ಯುವಕರ ಪ್ರತಿಯೊಂದು ಹೆಜ್ಜೆ, ನೀತಿ ಮತ್ತು ನಿರ್ಧಾರದ ಮೇಲೆ ಪ್ರಭಾವ ಬೀರಲು ಪ್ರಾರಂಭಿಸಿದರೆ, ಜಗತ್ತಿನ ಯಾವುದೇ ಶಕ್ತಿಯು ಭಾರತದ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದರು. ಯಾವುದೇ ದೇಶವು ಮುಂದುವರಿಯಲು ದೊಡ್ಡ ಗುರಿಗಳನ್ನು ಹೊಂದಿಸಬೇಕಾಗುತ್ತದೆ. ಇಂದಿನ ಭಾರತ ಕೂಡ ಈ ದಿಕ್ಕಿನಲ್ಲಿ ಸಾಗುತ್ತಿದೆ ಎಂದರು.

ಭಾರತದ 75 ವರ್ಷಗಳ ಅಮೃತಕಾಲದ ಸ್ವಾತಂತ್ರ್ಯವನ್ನು ಪೂರ್ಣಗೊಳಿಸಿ 2047ರವರೆಗೆ ನಡೆಯುತ್ತಿದೆ. ಈ ಸಮಯದಲ್ಲಿ ದೇಶದ ಯುವ ಜನತೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ಹೇಳಿದರು. ನಮ್ಮ ಸರ್ಕಾರ ಇತ್ತೀಚೆಗೆ 2030ರ ವೇಳೆಗೆ ಪೆಟ್ರೋಲ್‌ನಲ್ಲಿ ಶೇ 20 ರಷ್ಟು ಎಥೆನಾಲ್ ಮಿಶ್ರಣ ಮಾಡುವ ಗುರಿಯನ್ನು ಹೊಂದಿದ್ದು, ಅದನ್ನು ಶೀಘ್ರದಲ್ಲೇ ಸಾಧಿಸಲಾಗುವುದು ಎಂದು ಪ್ರಧಾನಿ ಹೇಳಿದರು. ಆದರೆ ಸರ್ಕಾರ ಮಾತ್ರ ದೇಶವನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ, ನಾವೆಲ್ಲರೂ ಮುಂದೆ ಬರಬೇಕು ಎಂದರು.

ನಮ್ಮ ದೇಶವು ಮುಂದಿನ ದಶಕದಲ್ಲಿ ಒಲಿಂಪಿಕ್ಸ್ ಅನ್ನು ಆಯೋಜಿಸುವ ಆಶಯವನ್ನು ಹೊಂದಿದೆ. ನಮ್ಮ ಸರ್ಕಾರ ಇದಕ್ಕಾಗಿ ಸಂಪೂರ್ಣ ಸಮರ್ಪಣಾಭಾವದಿಂದ ಕೆಲಸ ಮಾಡುತ್ತಿದೆ. ಭಾರತದ ಅಭಿವೃದ್ಧಿಯಲ್ಲಿ ಹೆಚ್ಚಿನ ಬೆಳವಣಿಗೆಯ ಪಾತ್ರವನ್ನು ಒತ್ತಿ ಹೇಳಿದ ಮೋದಿ, ದೇಶದ ಆರ್ಥಿಕತೆಯ ಬೆಳವಣಿಗೆಯೊಂದಿಗೆ ವಿವಿಧ ವಲಯಗಳಲ್ಲಿ ಅದರ ಸಾಮರ್ಥ್ಯ ಮತ್ತು ಬಜೆಟ್ ಹೇಗೆ ಹೆಚ್ಚಾಗಿದೆ ಎಂಬುದನ್ನು ನೆನಪಿಸಿಕೊಂಡರು. ಹತ್ತು ವರ್ಷಗಳಲ್ಲಿ ಮೂಲಸೌಕರ್ಯಕ್ಕಾಗಿ ಬಜೆಟ್ ಆರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು. ಭಾರತದ ಆರ್ಥಿಕತೆಯು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ. ಮುಂದಿನ ದಶಕದ ವೇಳೆಗೆ ಇದು 10,000 ಬಿಲಿಯನ್ ಡಾಲರ್‌ಗಳನ್ನು ದಾಟಲಿದೆ ಎಂದು ಹೇಳಿದರು. ಆದರೆ ಇದಕ್ಕಾಗಿ ನಾವು ನಮ್ಮ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT