ಸಾಂದರ್ಭಿಕ ಚಿತ್ರ online desk
ದೇಶ

ಸಾವಿನ ನಂತರ ಏನು? YouTube ಸರ್ಚ್; ಕುತೂಹಲಕ್ಕೆ ಗುಂಡು ಹಾರಿಸಿಕೊಂಡು 15 ವರ್ಷದ ಬಾಲಕ ಸಾವು!

ಈ ಘಟನೆ ನಡೆದಿರುವುದು ಮೀರಟ್ ನಲ್ಲಿ. 15 ವರ್ಷದ ಬಾಲಕನೊಬ್ಬನಿಗೆ ಸಾವಿನ ನಂತರ ಏನು? ಎಂಬ ಕುತೂಹಲ ಉಂಟಾಗಿದ್ದು, ಗೂಗಲ್, ಯೂಟ್ಯೂಬ್ ಗಳಲ್ಲಿ ಗರುಡ ಪುರಾಣದ ಬಗ್ಗೆ ಹುಡುಕಿದ್ದಾನೆ.

ಮೀರತ್: ಸಾವಿನ ನಂತರ ಏನಾಗುತ್ತದೆ? ಈ ರೀತಿಯ ಕುತೂಹಲ ಅಥವಾ ಜಿಜ್ಞಾಸೆಗಳಿದ್ದರೆ, ಯಾವುದಾದರೂ ಆಧ್ಯಾತ್ಮಿಕ ಗ್ರಂಥಗಳನ್ನು ಓದಿದರೆ, ಉತ್ತರ ಸಿಗಬಹುದೇನೋ. ಆದರೆ ಇಲ್ಲೊಬ್ಬ ಯುವಕ ಅದನ್ನು ಸ್ವತಃ ಅನುಭವಿಸಲು ಹೊಗಿ ಯಡವಟ್ಟು ಮಾಡಿಕೊಂಡಿದ್ದಾನೆ.

ಈ ಘಟನೆ ನಡೆದಿರುವುದು ಮೀರಟ್ ನಲ್ಲಿ. 15 ವರ್ಷದ ಬಾಲಕನೊಬ್ಬನಿಗೆ ಸಾವಿನ ನಂತರ ಏನು? ಎಂಬ ಕುತೂಹಲ ಉಂಟಾಗಿದ್ದು, ಗೂಗಲ್, ಯೂಟ್ಯೂಬ್ ಗಳಲ್ಲಿ ಗರುಡ ಪುರಾಣದ ಬಗ್ಗೆ ಹುಡುಕಿದ್ದಾನೆ. ನಂತರ ತನಗೆ ತಾನೇ ದೇಶೀ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾನೆ!

9 ನೇ ತರಗತಿಯಲ್ಲಿರುವ ಯುವರಾಜ್ ರಾಣ ಮೃತ ಬಾಲಕನಾಗಿದ್ದು, ಗುಂಡು ಹಾರಿಸಿಕೊಳ್ಳುವ ಮುನ್ನ ಆತ ಸಾವಿನ ರೀತಿ, ಸಾವಿನ ನಂತರ ಆತ್ಮ ಎಲ್ಲಿಗೆ ಹೋಗುತ್ತದೆ ಎಂಬುದರ ಬಗ್ಗೆ ತಿಳಿದುಕೊಳ್ಳುವುದಕ್ಕಾಗಿ ಗೂಗಲ್ ಹಾಗೂ ಯೂಟ್ಯೂಬ್ ನಲ್ಲಿ ಹುಡುಕಿದ್ದಾನೆ.

ಪೊಲೀಸ್ ಅಧಿಕಾರಿಗಳ ಪ್ರಕಾರ ಆತ ಯಾವುದೇ ಪತ್ರವನ್ನೂ ಬರೆದಿಟ್ಟಿಲ್ಲ. ಕುಟುಂಬ ಸದಸ್ಯರು ಘಟನೆ ನಡೆಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪಿಸ್ತೂಲನ್ನು ಆ ಬಾಲಕನ ಕೋಣೆಯಿಂದ ಪಡೆಯಲಾಗಿದ್ದು, ಪಿಸ್ತೂಲಿನ ಮೂಲವನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಯುವರಾಜ್ ಕೆಟ್ಟ ಜನರ ಸಹವಾಸದಲ್ಲಿದ್ದ ಎಂಬ ಕಾರಣಕ್ಕೆ ತಾಯಿ ಮತ್ತು ಸಹೋದರ ಎಂದು ಇತ್ತೀಚೆಗೆ ಗದರಿಸಿದ್ದರಿಂದ ಆತ ಅಸಮಾಧಾನಗೊಂಡಿದ್ದ ಎಂದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಕುಟುಂಬ ಅವರ ಬೈಕನ್ನು ಸಹ ಮಾರಾಟ ಮಾಡಿತು, ಇದು ಆತನನ್ನು ಮತ್ತಷ್ಟು ಕೆರಳಿಸಿತ್ತು ಎಂದು ಅಧಿಕಾರಿ ಹೇಳಿದರು. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT