ಸ್ಪೀಕರ್ ಗೆ ಪಿವಿ ಅನ್ವರ್ ರಾಜಿನಾಮೆ ಸಲ್ಲಿಕೆ TNIE
ದೇಶ

ಸಿಎಂ ಪಿಣರಾಯಿ ಸರ್ಕಾರಕ್ಕೆ ಕೌಂಟಡೌನ್ ಶುರು: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ TMC ಸೇರಿದ ಪಿವಿ ಅನ್ವರ್ ವಾರ್ನಿಂಗ್!

30 ವರ್ಷಗಳಿಂದ ಕಾಂಗ್ರೆಸ್‌ನ ಆರ್ಯದನ್ ಮುಹಮ್ಮದ್ ಗೆಲ್ಲುತ್ತಿದ್ದ ನಿಲಂಬೂರ್ ಕ್ಷೇತ್ರವನ್ನು ಎರಡು ಬಾರಿ ಗೆಲ್ಲುವ ಮೂಲಕ ಅನ್ವರ್ ಎಡಪಂಥೀಯರಲ್ಲಿ ಜನಪ್ರಿಯರಾಗಿದ್ದರು.

ತಿರುವನಂತಪುರಂ: ನಿಲಂಬೂರು ಶಾಸಕ ಪಿ.ವಿ ಅನ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಇಂದು ಸ್ಪೀಕರ್ ಎ.ಎನ್. ಶಂಸೀರ್ ಅವರಿಗೆ ಸಲ್ಲಿಸಿದರು. ತೃಣಮೂಲ ಕಾಂಗ್ರೆಸ್ ಸೇರಿದ ನಂತರ ಅನರ್ಹತೆಯನ್ನು ತಪ್ಪಿಸಲು ಅನ್ವರ್ ರಾಜೀನಾಮೆ ನೀಡಿದ್ದಾರೆ. ಶನಿವಾರವೇ ತಮ್ಮ ರಾಜೀನಾಮೆ ಪತ್ರವನ್ನು ಇಮೇಲ್ ಮೂಲಕ ಕಳುಹಿಸಿರುವುದಾಗಿ ಅನ್ವರ್ ಸ್ಪಷ್ಟಪಡಿಸಿದ್ದಾರೆ. ವೈಯಕ್ತಿಕವಾಗಿ ಪತ್ರವನ್ನು ಸಲ್ಲಿಸಬೇಕಾಗಿರುವುದರಿಂದ ಇಂದು ಸ್ಪೀಕರ್ ಅವರನ್ನು ಭೇಟಿ ಮಾಡಿ ಪತ್ರವನ್ನು ಹಸ್ತಾಂತರಿಸಿದರು.

ಎಡಪಕ್ಷಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾದ ನಂತರ ತೃಣಮೂಲ ಕಾಂಗ್ರೆಸ್ ಸೇರಿದ ನಂತರ ಅನ್ವರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. 30 ವರ್ಷಗಳಿಂದ ಕಾಂಗ್ರೆಸ್‌ನ ಆರ್ಯದನ್ ಮುಹಮ್ಮದ್ ಗೆಲ್ಲುತ್ತಿದ್ದ ನಿಲಂಬೂರ್ ಕ್ಷೇತ್ರವನ್ನು ಎರಡು ಬಾರಿ ಭರ್ಜರಿ ಬಹುಮತದಿಂದ ಗೆಲ್ಲುವ ಮೂಲಕ ಅನ್ವರ್ ಎಡಪಂಥೀಯರಲ್ಲಿ ಜನಪ್ರಿಯರಾಗಿದ್ದರು. ಪೊಲೀಸರ ವಿರುದ್ಧದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸದ ನಂತರ ಅವರು ಸಿಪಿಎಂ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಹೋರಾಟ ಶುರು ಮಾಡಿದ್ದಾರೆ. ರಾಜೀನಾಮೆಯೊಂದಿಗೆ, ಅನ್ವರ್ ಎಡಪಂಥೀಯರೊಂದಿಗಿನ 14 ವರ್ಷಗಳ ಸಂಬಂಧವನ್ನು ತ್ಯಜಿಸಿದ್ದಾರೆ.

ಇನ್ನು ತಮ್ಮ ರಾಜಿನಾಮೆ ಕುರಿತಂತೆ ಪ್ರತಿಕ್ರಿಯಿಸಿದ ಪಿವಿ ಅನ್ವರ್, ಸಿಎಂ ಪಿಣರಾಯಿ ಸರ್ಕಾರಕ್ಕೆ ಕೌಂಟಡೌನ್ ಶುರುವಾಗಿದೆ. ತೃಣಮೂಲ ಪಕ್ಷದ ಭಾಗವಾಗಿ ಪಿಣರಾಯಿ ವಿಜಯನ್ ವಿರುದ್ಧದ ಹೋರಾಟವನ್ನು ಮುಂದುವರಿಸುವುದಾಗಿ ಅನ್ವರ್ ಹೇಳಿದ್ದಾರೆ. ರಾಜಿನಾಮೆ ಬೆನ್ನಲ್ಲೇ ಅನ್ವರ್ ಅವರನ್ನು ತೃಣಮೂಲ ಪಕ್ಷದ ರಾಜ್ಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಅನ್ವರ್ ನಿನ್ನೆ ಕೋಲ್ಕತ್ತಾದಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT