ಜೈಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ರಾಹುಲ್ ಗಾಂಧಿ  
ದೇಶ

ದೆಹಲಿ ಚುನಾವಣೆ: ಕಾಂಗ್ರೆಸ್ ಪ್ರಚಾರಕ್ಕೆ ರಾಹುಲ್ ಚಾಲನೆ; ಕೇಜ್ರಿವಾಲ್, ಮೋದಿ ವಿರುದ್ಧ ಟೀಕಾ ಪ್ರಹಾರ!

ಮೋದಿ ಅಥವಾ ಕೇಜ್ರಿವಾಲ್ ಅದಾನಿ ವಿರುದ್ಧ ಮಾತನಾಡುವುದನ್ನು ನೀವು ಎಂದಾದರೂ ನೋಡಿದ್ದೀರಾ?

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ ನೀಡಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಟೀಕಾ ಪ್ರಕಾರ ನಡೆಸಿದರು. ಪ್ರಚಾರ ಮತ್ತು ಸುಳ್ಳು ಭರವಸೆ ನೀಡುವುದರಲ್ಲಿ ಇಬ್ಬರೂ ಒಂದೇ ಎಂದು ಆರೋಪಿಸಿದರು.

ಸೀಲಾಂಪುರದಲ್ಲಿ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೆಹಲಿಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ರಣಕಹಳೆ ಊದಿದರು. ಕೇಜ್ರಿವಾಲ್ ಮತ್ತು ಮೋದಿಯವರು ಚುನಾವಣೆಯ ಸಮಯದಲ್ಲಿ ಭರಪೂರ ಭರವಸೆ ನೀಡುವ ಅಭ್ಯಾಸವನ್ನು ಹೊಂದಿದ್ದಾರೆ. ಆದರೆ ಚುನಾವಣೆ ನಂತರ ಕಣ್ಮರೆಯಾಗುತ್ತಾರೆ. ಕಾಂಗ್ರೆಸ್ ಸತತವಾಗಿ ಅಗತ್ಯವಿರುವ ಸಮಯದಲ್ಲಿ ಜನರ ಪರವಾಗಿ ನಿಂತಿದೆ ಎಂದು ಪ್ರತಿಪಾದಿಸಿದರು.

ಜಾತಿ ಆಧಾರಿತ ಜನಗಣತಿ, ಮೀಸಲಾತಿ ಮಿತಿ ಹೆಚ್ಚಳ ಅದಾನಿಯನ್ನು ಒಳಗೊಂಡ ಕ್ರೋನಿ ಕ್ಯಾಪಿಟಲಿಸಂ ಆರೋಪಗಳಂತಹ ರಾಷ್ಟ್ರೀಯ ವಿಷಯಗಳನ್ನು ಮರುಪರಿಶೀಲಿಸುವುದರೊಂದಿಗೆ ಭಾಷಣ ಆರಂಭಿಸಿದ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ಹೆಚ್ಚುತ್ತಿರುವ ಸಂಪತ್ತಿನ ಅಂತರವನ್ನು ಪರಿಹರಿಸುವಲ್ಲಿ ಮೋದಿ ಮತ್ತು ಕೇಜ್ರಿವಾಲ್ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಹಣದುಬ್ಬರವು ಬಡವರ ಬೆನ್ನು ಮುರಿಯುತ್ತಿದೆ. ಆದರೆ ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಅಂಬಾನಿ ಮತ್ತು ಅದಾನಿ ಪ್ರಧಾನಿ ಮೋದಿಯ ಮಾರ್ಕೆಟಿಂಗ್ ಏಜೆಂಟ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೋದಿ ಅಥವಾ ಕೇಜ್ರಿವಾಲ್ ಅದಾನಿ ವಿರುದ್ಧ ಮಾತನಾಡುವುದನ್ನು ನೀವು ಎಂದಾದರೂ ನೋಡಿದ್ದೀರಾ? ಅವರಿಬ್ಬರೂ ಒಂದೇ ಸ್ಕ್ರೀಪ್ಟ್ ಹಂಚಿಕೊಳ್ಳುವುದರಿಂದ ಮೌನವಾಗಿದ್ದಾರೆ ಎಂದು ಟೀಕಿಸಿದರು.

ಜಾತಿ ಗಣತಿ ಮತ್ತು ಮೀಸಲಾತಿ ಹೆಚ್ಚಳದಂತಹ ಪ್ರಮುಖ ಬೇಡಿಕೆಗಳಿಗೆ ಅವರ ಬದ್ಧತೆಯನ್ನು ಪ್ರಶ್ನಿಸುವ ಮೂಲಕ ಇಂಡಿಯಾ ಬಣದ ಮೈತ್ರಿ ಪಕ್ಷದ ನಾಯಕ ಕೇಜ್ರಿವಾಲ್ ವಿರುದ್ಧ ರಾಹುಲ್ ಗಾಂಧಿ ನೇರವಾಗಿ ವಾಗ್ದಾಳಿ ನಡೆಸಿದರು.

'ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಮೋದಿಯವರಾಗಲಿ, ಕೇಜ್ರಿವಾಲ್ ಆಗಲಿ ಒಂದೇ ಒಂದು ಮಾತನ್ನೂ ಹೇಳುವುದಿಲ್ಲ. ಏಕೆಂದರೆ ಹಿಂದುಳಿದ ವರ್ಗಗಳು, ದಲಿತರು, ಬುಡಕಟ್ಟುಗಳು ಮತ್ತು ಅಲ್ಪಸಂಖ್ಯಾತರ ಮತಗಳನ್ನು ಇಬ್ಬರೂ ಬಯಸುತ್ತಾರೆ. ಕೇಜ್ರಿವಾಲ್, ಮೋದಿ ಅವರು ಜಾತಿ ಗಣತಿ ಪರ ಇದ್ದಾರಾ ಎಂಬುದನ್ನು ಕೇಳಿ ಎಂದು ಜನತೆಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT