ದೇಶ

ದೆಹಲಿ ಚುನಾವಣೆ: ಮತದಾರರ ಪಟ್ಟಿ ತಿರುಚಲು ಯತ್ನ, AAP ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

AAP ಕೋಮು ಗಲಭೆ ಉಂಟು ಮಾಡುವ ಉದ್ದೇಶ ಹೊಂದಿದ್ದು, ಪೂರ್ವಾಂಚಲ್‌ನ ಬಡವರು, ಕಾರ್ಮಿಕರು ಮತ್ತು ಜನರ ಮತಗಳನ್ನು ತಿರುಚಲು ಪ್ರಯತ್ನಿಸುತ್ತಿದೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವು (AAP) ಮತದಾರರ ಪಟ್ಟಿ ತಿರುಚಲು ಯತ್ನಿಸುತ್ತಿದೆ ಎಂದು ಆರೋಪಿಸಿ ದೆಹಲಿಯ ಬಿಜೆಪಿ ನಿಯೋಗವೊಂದು ಚುನಾವಣಾ ಆಯುಕ್ತರಿಗೆ ಮಂಗಳವಾರ ದೂರು ನೀಡಿದೆ.

ಸಂಸದ ಬಾನ್ಸುರಿ ಸ್ವರಾಜ್ ಮತ್ತು ಹಿರಿಯ ನಾಯಕ ಓಂ ಪಾಠಕ್ ಅವರೊಂದಿಗೆ ಚುನಾವಣಾ ಆಯೋಗದ ಅಧಿಕಾರಿಗಳು ಭೇಟಿಯಾದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ, AAP ಪೂರ್ವಾಂಚಲ್ ಪ್ರದೇಶದ ಜನರ ಮತಗಳನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿದೆ. ನಿರ್ದಿಷ್ಟ ಗುಂಪುಗಳಿಗೆ ಅನಗತ್ಯ ಬೆಂಬಲ ನೀಡುತ್ತಿದ್ದು,ಅನಗತ್ಯವಾಗಿ ವಿಧಾನಸಭೆ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದೆ ಎಂದು ಆರೋಪಿಸಿದರು.

ಚುನಾವಣಾ ಆಯುಕ್ತರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚ್‌ದೇವ, ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದು, ದೆಹಲಿಯ ಮತದಾರರ ಪಟ್ಟಿಯನ್ನು ತಿರುಚುವ ಎಎಪಿಯ ಪ್ರಯತ್ನಗಳನ್ನು ಬಹಿರಂಗಪಡಿಸುವ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದು ತಿಳಿಸಿದರು.

AAP ಕೋಮು ಗಲಭೆ ಉಂಟು ಮಾಡುವ ಉದ್ದೇಶ ಹೊಂದಿದ್ದು, ಪೂರ್ವಾಂಚಲ್‌ನ ಬಡವರು, ಕಾರ್ಮಿಕರು ಮತ್ತು ಜನರ ಮತಗಳನ್ನು ತಿರುಚಲು ಪ್ರಯತ್ನಿಸುತ್ತಿದೆ. ಅದಕ್ಕೆ ಪೂರಕ ದಾಖಲೆಗಳನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

ನವದೆಹಲಿಯ ಮಂದಿರ ಮಾರ್ಗದಲ್ಲಿರುವ ವಾಲ್ಮೀಕಿ ದೇವಸ್ಥಾನದ ಬಳಿ, ದರ್ಗಾಕ್ಕೆ ಸಂಬಂಧಿಸಿದ 60 ನೋಂದಾಯಿತ ಮತಗಳಿವೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಅಲ್ಲದೇ, ಆಶ್ರಯ ಮನೆಯಡಿ ನೋಂದಾಯಿಸಲಾದ 250 ಮತಗಳನ್ನು ಪತ್ತೆಹಚ್ಚಿದ್ದೇವೆ, ಇದು ಪರಿಶೀಲನೆಯ ಅಗತ್ಯವಿದೆ. ಈ ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸಿ ಪೂರ್ವಾಂಚಲಿ ಸಹೋದರ ಸಹೋದರಿಯರಿಗೆ ಅಥವಾ ವಾಲ್ಮೀಕಿ ಸಮುದಾಯದವರಿಗೆ ಬೆದರಿಕೆ ಹಾಕುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT