ಬಂಧಿತ ಆರೋಪಿಯೊಂದಿಗೆ ಪೊಲೀಸರು 
ದೇಶ

ತಿರುಮಲ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ; ಟಿಟಿಡಿ ಹೊರಗುತ್ತಿಗೆ ಸಿಬ್ಬಂದಿ ಬಂಧನ

ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ರೂ. 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ 40 ವರ್ಷದ ವಿ. ಪೆಂಚಲಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತಿರುಪತಿ: ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಂದ ದೇವರಿಗೆ ಕಾಣಿಕೆಯಾಗಿ ಸ್ವೀಕರಿಸಿದ ಅರ್ಧ ಕೆಜಿಗೂ ಹೆಚ್ಚು ಚಿನ್ನವನ್ನು ಕದ್ದ ಆರೋಪದ ಮೇಲೆ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊರಗುತ್ತಿಗೆ ನೌಕರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ರೂ. 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ 40 ವರ್ಷದ ವಿ. ಪೆಂಚಲಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೆಂಚಲಯ್ಯ ಪರಕಾಮಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ದೇವರಿಗೆ ಅರ್ಪಿಸಲಾದ ಕಾಣಿಕೆಗಳನ್ನು ವಿಂಗಡಿಸಲಾಗುತ್ತಿದೆ. ಅವರು ದೇವರಿಗೆ ನೀಡಲಾದ ಚಿನ್ನವನ್ನು ಕದಿಯುವುದರಲ್ಲಿ ತೊಡಗಿದ್ದರು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದರು.

ಪರಕಾಮಣಿಯಲ್ಲಿ, ನಗದು, ಚಿನ್ನಾಭರಣ ಮತ್ತಿತರ ಕಾಣಿಕೆಗಳನ್ನು ವಿಂಗಡಿಸಲಾಗುತ್ತದೆ. ನಗದನ್ನು ಬ್ಯಾಂಕಿನಲ್ಲಿ ಠೇವಣಿಯಾಗಿಡಲಾಗುತ್ತದೆ. ಇತರ ಬೆಲೆ ಬಾಳುವ ವಸ್ತುಗಳನ್ನು ಲಾಕರ್ ನಲ್ಲಿ ಇಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಪರಾಕಮಣಿಯಲ್ಲಿ ಕೆಲಸ ಮಾಡುತ್ತಿದ್ದ ಪೆಂಚಲಯ್ಯ ಎಂಬುವರು ವಾಹನಕ್ಕೆ ಜಾರಿಸಿ ಚಿನ್ನದ ಬಿಸ್ಕತ್ ಕದಿಯಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಜ.12ರಂದು ಆರೋಪಿಯನ್ನು ಬಂಧಿಸಿ ಸೋಮವಾರ ರಿಮಾಂಡ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. BNS ಸೆಕ್ಷನ್ 316 (5) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT