ಬಂಧಿತ ಆರೋಪಿಯೊಂದಿಗೆ ಪೊಲೀಸರು 
ದೇಶ

ತಿರುಮಲ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ; ಟಿಟಿಡಿ ಹೊರಗುತ್ತಿಗೆ ಸಿಬ್ಬಂದಿ ಬಂಧನ

ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ರೂ. 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ 40 ವರ್ಷದ ವಿ. ಪೆಂಚಲಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತಿರುಪತಿ: ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಂದ ದೇವರಿಗೆ ಕಾಣಿಕೆಯಾಗಿ ಸ್ವೀಕರಿಸಿದ ಅರ್ಧ ಕೆಜಿಗೂ ಹೆಚ್ಚು ಚಿನ್ನವನ್ನು ಕದ್ದ ಆರೋಪದ ಮೇಲೆ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊರಗುತ್ತಿಗೆ ನೌಕರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ರೂ. 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ 40 ವರ್ಷದ ವಿ. ಪೆಂಚಲಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೆಂಚಲಯ್ಯ ಪರಕಾಮಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ದೇವರಿಗೆ ಅರ್ಪಿಸಲಾದ ಕಾಣಿಕೆಗಳನ್ನು ವಿಂಗಡಿಸಲಾಗುತ್ತಿದೆ. ಅವರು ದೇವರಿಗೆ ನೀಡಲಾದ ಚಿನ್ನವನ್ನು ಕದಿಯುವುದರಲ್ಲಿ ತೊಡಗಿದ್ದರು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದರು.

ಪರಕಾಮಣಿಯಲ್ಲಿ, ನಗದು, ಚಿನ್ನಾಭರಣ ಮತ್ತಿತರ ಕಾಣಿಕೆಗಳನ್ನು ವಿಂಗಡಿಸಲಾಗುತ್ತದೆ. ನಗದನ್ನು ಬ್ಯಾಂಕಿನಲ್ಲಿ ಠೇವಣಿಯಾಗಿಡಲಾಗುತ್ತದೆ. ಇತರ ಬೆಲೆ ಬಾಳುವ ವಸ್ತುಗಳನ್ನು ಲಾಕರ್ ನಲ್ಲಿ ಇಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಪರಾಕಮಣಿಯಲ್ಲಿ ಕೆಲಸ ಮಾಡುತ್ತಿದ್ದ ಪೆಂಚಲಯ್ಯ ಎಂಬುವರು ವಾಹನಕ್ಕೆ ಜಾರಿಸಿ ಚಿನ್ನದ ಬಿಸ್ಕತ್ ಕದಿಯಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಜ.12ರಂದು ಆರೋಪಿಯನ್ನು ಬಂಧಿಸಿ ಸೋಮವಾರ ರಿಮಾಂಡ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. BNS ಸೆಕ್ಷನ್ 316 (5) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT