ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: 900 ಮೆಟ್ಟಿಲುಗಳನ್ನು ಹತ್ತಿ, ಇಳಿಯುವಾಗ 25 ವರ್ಷದ ಯುವಕ ಸಾವು!

ಮಂಗಳವಾರ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಸ್ಥಳೀಯ ನಿವಾಸಿ ಮಿಲನ್ ಡೊಂಬ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ತಲಸಾರಿಯಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿದ 25 ವರ್ಷದ ಯುವಕನೊಬ್ಬ ಇಳಿಯುವಾಗ ಸಾವನ್ನಪ್ಪಿದ್ದಾರೆ.

ಮಂಗಳವಾರ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಸ್ಥಳೀಯ ನಿವಾಸಿ ಮಿಲನ್ ಡೊಂಬ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣ ಆತನನ್ನು ಕಾಸಾ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಆತನ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಮಿಲನ್ ಗೆ ಹೃದಯಾಘಾತವಾಗಿರಬಹುದು ಎಂದು ಕುಟುಂಬ ಸದಸ್ಯರು ಶಂಕಿಸಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಹೇಮಂತ್ ಬೆಹೆರೆ ಅವರು, ಮರಣೋತ್ತರ ಪರೀಕ್ಷಾ ವರದಿ ಲಭ್ಯವಾದ ನಂತರವೇ ಸಾವಿಗೆ ಕಾರಣವನ್ನು ಖಚಿತಪಡಿಸಿಕೊಳ್ಳಬಹುದು ಎಂದಿದ್ದಾರೆ.

ಮಹಾರಾಷ್ಟ್ರದ ಜನಪ್ರಿಯ ಯಾತ್ರಾ ಸ್ಥಳವಾದ ಈ ದೇವಸ್ಥಾನಕ್ಕೆ ಮಂಗಳವಾರ, ಶುಕ್ರವಾರ ಮತ್ತು ವಾರಾಂತ್ಯದಲ್ಲಿ ಭಾರಿ ಜನಸಂದಣಿ ಇರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT