ಮಲ್ಲಿಕಾರ್ಜುನ ಖರ್ಗೆ 
ದೇಶ

ವಾರಕ್ಕೆ 90 ಗಂಟೆ ಕೆಲಸ: L&T ಸಂಸ್ಥೆಗೆ ಧನ್ಯವಾದ ಹೇಳುತ್ತೇನೆ, ಆದರೆ...; ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಬಿಆರ್ ಅಂಬೇಡ್ಕರ್ ಅವರು ಕಾರ್ಮಿಕರು ದಿನದಲ್ಲಿ ಎಂಟು ಗಂಟೆಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡಬಾರದು ಎಂದು ಪ್ರತಿಪಾದಿಸಿದ್ದರು ಎಂದಿದ್ದಾರೆ.

ನವದೆಹಲಿ: L&T ಚೇರ್ಮನ್ ಎಸ್ಎನ್ ಸುಬ್ರಹ್ಮಣ್ಯನ್ ಅವರು ನೌಕರರು ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕೆನ್ನುವ ಹೇಳಿಕೆಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಬುಧವಾರ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಬಿಆರ್ ಅಂಬೇಡ್ಕರ್ ಅವರು ಕಾರ್ಮಿಕರು ದಿನದಲ್ಲಿ ಎಂಟು ಗಂಟೆಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡಬಾರದು ಎಂದು ಪ್ರತಿಪಾದಿಸಿದ್ದರು ಎಂದಿದ್ದಾರೆ.

ಇಲ್ಲಿನ ಕೋಟ್ಲಾ ರಸ್ತೆಯ 9ಎಯಲ್ಲಿ ನಿರ್ಮಿಸಲಾಗಿರುವ ಕಾಂಗ್ರೆಸ್‌ನ ನೂತನ ಕೇಂದ್ರ ಕಚೇರಿಯನ್ನು ಉದ್ಘಾಟಿಸಿದ ನಂತರ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ನೂತನ ಪಕ್ಷದ ಪ್ರಧಾನ ಕಚೇರಿಯನ್ನು ನಿರ್ಮಿಸುವಲ್ಲಿ L&T ಕನ್‌ಸ್ಟ್ರಕ್ಷನ್‌ ಮಾಡಿರುವ ಕಾರ್ಯವನ್ನು ಶ್ಲಾಘಿಸಿದರು.

'L&T ಸಂಸ್ಥೆಯು ಈ ಕಚೇರಿಯ ನಿರ್ಮಾಣ ಮಾಡಿರುವುದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. L&T ಕನ್‌ಸ್ಟ್ರಕ್ಷನ್, ಆರ್ಕಿಟೆಕ್ಟ್‌ಗಳು, ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದ ಕಾರ್ಮಿಕರಿಗೆ ಧನ್ಯವಾದ ಹೇಳುತ್ತೇನೆ. ಆದರೆ, ಕಂಪನಿಯ ಚೇರ್ಮನ್ ಮಾಡಿರುವ ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ' ಎಂದು ಹೇಳಿದರು.

ಒಬ್ಬ ಕಾರ್ಮಿಕ ಎಂಟು ಗಂಟೆ ಕೆಲಸ ಮಾಡಿ ಸುಸ್ತಾಗುತ್ತಾನೆ. ಅದಕ್ಕಾಗಿಯೇ ನೆಹರು ಮತ್ತು ಅಂಬೇಡ್ಕರ್ ಅವರು ಕಾರ್ಖಾನೆ ಕಾಯಿದೆ ಮಾಡುವಾಗ ಕಾರ್ಮಿಕರಿಂದ ಎಂಟು ಗಂಟೆಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡಿಸಬಾರದು ಎಂದು ಹೇಳಿದ್ದರು. 'ನಂತರ ಯಾರೋ 9 ಗಂಟೆ ಕೆಲಸ ಮಾಡಬೇಕೆಂದರು. ಆದರೆ, ಇದೀಗ ಎಲ್ & ಟಿ ಮುಖ್ಯಸ್ಥರು ನೌಕರರು 12 ಗಂಟೆ, 14 ಗಂಟೆ ಕೆಲಸ ಮಾಡಬೇಕೆಂದು ಮಾತನಾಡುತ್ತಿದ್ದಾರೆ. ಅವರು ಈ ದೃಷ್ಟಿಕೋನವನ್ನು ತಮ್ಮ ತಲೆಯಿಂದ ತೆಗೆದುಹಾಕಬೇಕು. ಆದರೆ, ನಾನು ಕಂಪನಿಗೆ ಧನ್ಯವಾದ ಹೇಳುತ್ತೇನೆ. ಏಕೆಂದರೆ, ಅವರು ಉತ್ತಮ ಕೆಲಸ ಮಾಡಿದ್ದಾರೆ. ಕಾರ್ಮಿಕರ ಶ್ರಮಕ್ಕೆ ಧನ್ಯವಾದ ಅರ್ಪಿಸುತ್ತೇನೆ' ಎಂದು ಖರ್ಗೆ ಹೇಳಿದರು.

ಪಕ್ಷದ ಹೊಸ ಪ್ರಧಾನ ಕಛೇರಿಯ ನಿರ್ಮಾಣ ಮತ್ತು ಪೂರ್ಣಗೊಳಿಸುವಿಕೆಯ ಕೆಲಸವನ್ನು ಮೇಲ್ವಿಚಾರಣೆ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷರು ಧನ್ಯವಾದ ಅರ್ಪಿಸಿದರು.

ಎಲ್&ಟಿ ಅಧ್ಯಕ್ಷ ಎಸ್‌ಎನ್ ಸುಬ್ರಹ್ಮಣ್ಯನ್ ಅವರು ಇತ್ತೀಚೆಗಷ್ಟೇ, ಸ್ಪರ್ಧಾತ್ಮಕವಾಗಿ ಉಳಿಯಲು ನೌಕರರು ಭಾನುವಾರದಂದು ಸಹ ಕೆಲಸ ಮಾಡಬೇಕು. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ಭಾನುವಾರಗಳಂದು ನಿಮ್ಮನ್ನು ಕೆಲಸಕ್ಕೆ ತೊಡಗಿಸದಿರುವುದಕ್ಕೆ ವಿಷಾದವಿದೆ. ಭಾನುವಾರದಂದೂ ನೀವು ಕೆಲಸ ಮಾಡುವಂತಾದರೆ ಅದು ನನಗೆ ಹೆಚ್ಚಿನ ಖುಷಿ ಕೊಡುತ್ತದೆ. ಏಕೆಂದರೆ ನಾನೂ ಕೂಡ ಭಾನುವಾರಗಳಂದು ಕೆಲಸ ಮಾಡುತ್ತೇನೆ. ಭಾನುವಾರ ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ಎಷ್ಟು ಸಮಯ ನಿಮ್ಮ ಹೆಂಡತಿಯನ್ನೇ ನೋಡುತ್ತಾ ಕುಳಿತಿರುತ್ತೀರಿ? ಹೆಂಡತಿಯರೂ ಅಷ್ಟೇ ಎಷ್ಟು ಅಂತ ಗಂಡನ ಮುಖ ನೋಡುತ್ತಾ ಕುಳಿತಿರಲು ಸಾಧ್ಯ? ಅದರ ಬದಲು ಕಚೇರಿಗೆ ಬಂದು ಕೆಲಸ ಮಾಡಿ ಎಂದು ನೌಕರರಿಗೆ ಕರೆ ನೀಡಿದ್ದರು.

ಸುಬ್ರಹ್ಮಣ್ಯನ್ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. RPG ಗ್ರೂಪ್ ಚೇರ್ಮನ್ ಹರ್ಷ್ ಗೋಯೆಂಕಾ, ಭಾರತದ ಮಾಜಿ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಮತ್ತು ಖ್ಯಾತ ಉದ್ಯಮಿ ಆನಂದ್ ಮಹಿಂದ್ರ ಸೇರಿದಂತೆ ಹಲವರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಕೂಡ ಈ ಹಿಂದೆ ನೌಕರರು ವಾರಕ್ಕೆ 70 ಗಂಟೆಗಳು ಕೆಲಸ ಮಾಡಬೇಕು ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?