ಮಾರ್ಕ್ ಝುಕರ್ಬರ್ಗ್ online desk
ದೇಶ

2024 ರ ಚುನಾವಣೆ ಬಗ್ಗೆ ತಪ್ಪು ಮಾಹಿತಿ: Zuckerberg ಹೇಳಿಕೆಗೆ ಕ್ಷಮೆ ಕೋರಿದ Meta

"ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ. ಭಾರತವು Meta ಗೆ ಪ್ರಮುಖ ದೇಶವಾಗಿ ಉಳಿದಿದೆ ಮತ್ತು ಭಾರತದ ನವೀನ ಭವಿಷ್ಯದ ಕೇಂದ್ರಭಾಗದಲ್ಲಿರುವುದನ್ನು ನಾವು ಎದುರು ನೋಡುತ್ತಿದ್ದೇವೆ" ಎಂದು ಸಂಸ್ಥೆ ಹೇಳಿದೆ.

ನವದೆಹಲಿ: 2024 ರ ಚುನಾವಣೆಯಲ್ಲಿ ಭಾರತದ ಅಂದಿನ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂಬ ಮಾರ್ಕ್ ಝುಕರ್ಬರ್ಗ್ ಹೇಳಿಕೆಗೆ ವ್ಯಾಪಕ ಟೀಕೆ, ವಿರೋಧ ವ್ಯಕ್ತವಾಗುತ್ತಿದ್ದಂತೆಯೇ Meta ಕ್ಷಮೆ ಕೋರಿದೆ.

ಝುಕರ್ಬರ್ಗ್ ಹೇಳಿಕೆಯನ್ನು ಅಪ್ರಜ್ಞಾಪೂರ್ವಕ ದೋಷ ಎಂದು ಮೆಟಾ ಸಂಸ್ಥೆ ಹೇಳಿದೆ. ಝುಕರ್ಬರ್ಗ್ ಹೇಳಿಕೆಗೆ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನುದ್ದೇಶಿಸಿ ಪ್ರತಿಕ್ರಿಯೆ ನೀಡಿರುವ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವಂತ್ ತುಕ್ರಾಲ್ "ಅಧಿಕಾರದಲ್ಲಿದ್ದ ಹಲವು ಪಕ್ಷಗಳು 2024 ರಲ್ಲಿ ಮತ್ತೆ ಅಧಿಕಾರಕ್ಕೆ ಬರಲಿಲ್ಲ ಎಂಬ ಮಾರ್ಕ್ ಝುಕರ್ಬರ್ಗ್ ಅವರ ಹೇಳಿಕೆ ಹಲವು ರಾಷ್ಟ್ರಗಳಿಗೆ ಹೊಂದಾಣಿಕೆಯಾಗುತ್ತದೆ. ಆದರೆ ಭಾರತಕ್ಕೆ ಅಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

"ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ. ಭಾರತವು Meta ಗೆ ಪ್ರಮುಖ ದೇಶವಾಗಿ ಉಳಿದಿದೆ ಮತ್ತು ಭಾರತದ ನವೀನ ಭವಿಷ್ಯದ ಕೇಂದ್ರಭಾಗದಲ್ಲಿರುವುದನ್ನು ನಾವು ಎದುರು ನೋಡುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಈ ಹಿಂದೆ ಜೋ ರೋಗನ್ ಪಾಡ್‌ಕ್ಯಾಸ್ಟ್‌ನಲ್ಲಿ ಜುಕರ್‌ಬರ್ಗ್ ಮಾಡಿದ ಹೇಳಿಕೆಗಳನ್ನು ಖಂಡಿಸಿದ್ದರು. "2024 ರ ಚುನಾವಣೆಯಲ್ಲಿ ಭಾರತ ಸೇರಿದಂತೆ ಹೆಚ್ಚಿನ ಅಧಿಕಾರದಲ್ಲಿದ್ದ ಪಕ್ಷಗಳು ಕೋವಿಡ್ ನಂತರ ಸೋತಿವೆ ಎಂಬ ಜುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ" ಎಂದು ವೈಷ್ಣವ್ ಜನವರಿ 13 ರಂದು X (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದರು.

"ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಭಾರತ 2024 ರ ಚುನಾವಣೆಯನ್ನು 640 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರೊಂದಿಗೆ ನಡೆಸಿತು. ಭಾರತದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ NDA ಯಲ್ಲಿ ತಮ್ಮ ನಂಬಿಕೆಯನ್ನು ಮತದಾನದ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದರು" ಎಂದು ಮಾಹಿತಿ ಮತ್ತು ಪ್ರಸಾರ ಹಾಗೂ ಐಟಿ ಸಚಿವರಾಗಿರುವ ವೈಷ್ಣವ್ ಹೇಳಿದ್ದರು.

ಜುಕರ್‌ಬರ್ಗ್ ಅವರ ಹೇಳಿಕೆಗಳನ್ನು ತಪ್ಪು ಮಾಹಿತಿ ಎಂದು ಸಚಿವರು ತಳ್ಳಿಹಾಕಿದ್ದರು ಮತ್ತು ಮೆಟಾ ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯಬೇಕು ಎಂದು ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT