ಸಾಂದರ್ಭಿಕ ಚಿತ್ರ 
ದೇಶ

8th Pay Commission | ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 8ನೇ ವೇತನ ಆಯೋಗ ರಚನೆಗೆ 'ಕೇಂದ್ರ ಸಂಪುಟ' ಅಸ್ತು

ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ದೊರೆತಿದ್ದು, 8ನೇ ವೇತನ ಆಯೋಗ ರಚನೆಗೆ 'ಕೇಂದ್ರ ಸಂಪುಟ ಸಭೆ' ಅಸ್ತು ಎಂದಿದೆ.

ಹೌದು.. ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದ್ದು, ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಸಚಿವ ವೈಷ್ಣವ್ ತಿಳಿಸಿದ್ದಾರೆ.

"ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನ ಮಂತ್ರಿಗಳು 8ನೇ ಕೇಂದ್ರ ವೇತನ ಆಯೋಗವನ್ನು ಅನುಮೋದಿಸಿದ್ದಾರೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು. ಪ್ರಸ್ತುತ 49 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 65 ಲಕ್ಷ ಪಿಂಚಣಿದಾರರಿದ್ದಾರೆ.

2025ರಲ್ಲಿ ಹೊಸ ವೇತನ ಆಯೋಗವನ್ನು ಸ್ಥಾಪಿಸುವುದರಿಂದ 7ನೇ ವೇತನ ಸಮಿತಿಯ ಅವಧಿ ಪೂರ್ಣಗೊಳ್ಳುವ ಮೊದಲೇ ಅದರ ಶಿಫಾರಸುಗಳನ್ನು ಸ್ವೀಕರಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಅಂದಹಾಗೆ 2025ರ ಬಜೆಟ್ ಘೋಷಣೆಗಳಿಗೆ ಕೆಲವು ದಿನಗಳ ಮೊದಲು ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗದ ಘೋಷಣೆಯನ್ನು ಅನುಮೋದಿಸಿದೆ. 7ನೇ ವೇತನ ಆಯೋಗವನ್ನು 2014 ರಲ್ಲಿ ರಚಿಸಲಾಯಿತು ಮತ್ತು ಅದರ ಶಿಫಾರಸುಗಳನ್ನು ಜನವರಿ 1, 2016 ರಂದು ಜಾರಿಗೆ ತರಲಾಯಿತು.

1947 ರಿಂದ ಸರ್ಕಾರವು ಏಳು ವೇತನ ಆಯೋಗಗಳನ್ನು ರಚಿಸಿದೆ. ಸರ್ಕಾರಿ ನೌಕರರಿಗೆ ವೇತನ ರಚನೆಗಳು, ಪ್ರಯೋಜನಗಳು ಮತ್ತು ಭತ್ಯೆಗಳನ್ನು ನಿರ್ಧರಿಸುವಲ್ಲಿ ವೇತನ ಆಯೋಗವು ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಿನ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಆಯೋಗದ ಶಿಫಾರಸುಗಳನ್ನು ಅನುಸರಿಸುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಮಂಡ್ಯ: 1,844 ಅಕ್ರಮ ಇ-ಖಾತಾ ವಿತರಣೆ: ಮೂವರು ಪಿಡಿಒಗಳು ಸೇರಿ ನಾಲ್ವರು ಅಧಿಕಾರಿಗಳ ಅಮಾನತು

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಮೊಮ್ಮಗ ಮನಾಲಿ ಹೋಟೆಲ್‌ನಲ್ಲಿ ಶವವಾಗಿ ಪತ್ತೆ!

SCROLL FOR NEXT