ಸಾಂದರ್ಭಿಕ ಚಿತ್ರ 
ದೇಶ

8th Pay Commission | ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 8ನೇ ವೇತನ ಆಯೋಗ ರಚನೆಗೆ 'ಕೇಂದ್ರ ಸಂಪುಟ' ಅಸ್ತು

ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ದೊರೆತಿದ್ದು, 8ನೇ ವೇತನ ಆಯೋಗ ರಚನೆಗೆ 'ಕೇಂದ್ರ ಸಂಪುಟ ಸಭೆ' ಅಸ್ತು ಎಂದಿದೆ.

ಹೌದು.. ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದ್ದು, ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಸಚಿವ ವೈಷ್ಣವ್ ತಿಳಿಸಿದ್ದಾರೆ.

"ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನ ಮಂತ್ರಿಗಳು 8ನೇ ಕೇಂದ್ರ ವೇತನ ಆಯೋಗವನ್ನು ಅನುಮೋದಿಸಿದ್ದಾರೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು. ಪ್ರಸ್ತುತ 49 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 65 ಲಕ್ಷ ಪಿಂಚಣಿದಾರರಿದ್ದಾರೆ.

2025ರಲ್ಲಿ ಹೊಸ ವೇತನ ಆಯೋಗವನ್ನು ಸ್ಥಾಪಿಸುವುದರಿಂದ 7ನೇ ವೇತನ ಸಮಿತಿಯ ಅವಧಿ ಪೂರ್ಣಗೊಳ್ಳುವ ಮೊದಲೇ ಅದರ ಶಿಫಾರಸುಗಳನ್ನು ಸ್ವೀಕರಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಅಂದಹಾಗೆ 2025ರ ಬಜೆಟ್ ಘೋಷಣೆಗಳಿಗೆ ಕೆಲವು ದಿನಗಳ ಮೊದಲು ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗದ ಘೋಷಣೆಯನ್ನು ಅನುಮೋದಿಸಿದೆ. 7ನೇ ವೇತನ ಆಯೋಗವನ್ನು 2014 ರಲ್ಲಿ ರಚಿಸಲಾಯಿತು ಮತ್ತು ಅದರ ಶಿಫಾರಸುಗಳನ್ನು ಜನವರಿ 1, 2016 ರಂದು ಜಾರಿಗೆ ತರಲಾಯಿತು.

1947 ರಿಂದ ಸರ್ಕಾರವು ಏಳು ವೇತನ ಆಯೋಗಗಳನ್ನು ರಚಿಸಿದೆ. ಸರ್ಕಾರಿ ನೌಕರರಿಗೆ ವೇತನ ರಚನೆಗಳು, ಪ್ರಯೋಜನಗಳು ಮತ್ತು ಭತ್ಯೆಗಳನ್ನು ನಿರ್ಧರಿಸುವಲ್ಲಿ ವೇತನ ಆಯೋಗವು ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಿನ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಆಯೋಗದ ಶಿಫಾರಸುಗಳನ್ನು ಅನುಸರಿಸುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT