ಜೆ.ಪಿ. ನಡ್ಡಾ  
ದೇಶ

ದೆಹಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: 500 ರೂ ಗೆ ಎಲ್‌ಪಿಜಿ, ಮಹಿಳೆಯರಿಗೆ ತಿಂಗಳಿಗೆ 2500 ರೂ ಭರವಸೆ

ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.

ನವದೆಹಲಿ: ಫೆಬ್ರವರಿ 5 ರಂದು ನಡೆಯುವ ದೆಹಲಿ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ಪ್ರಣಾಳಿಕೆ 'ಸಂಕಲ್ಪ ಪತ್ರ'ವನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ತಿಂಗಳಿಗೆ 2500 ರೂ. ಹಾಗೂ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.

ಪಕ್ಷವು ಅಧಿಕಾರಕ್ಕೆ ಬಂದರೆ ಅಸ್ತಿತ್ವದಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವುದಾಗಿ ಮತ್ತು ಹಲವಾರು ಹೊಸ ಉಪಕ್ರಮಗಳನ್ನು ಪರಿಚಯಿಸುವುದಾಗಿ ನಡ್ಡಾ ಪ್ರತಿಜ್ಞೆ ಮಾಡಿದರು.

ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಸಾಧನೆಗಳನ್ನು ಎತ್ತಿ ತೋರಿಸಿದ ನಡ್ಡಾ, "ನಾವು 2014 ರಲ್ಲಿ 500 ಭರವಸೆಗಳನ್ನು ನೀಡಿದ್ದೇವೆ ಮತ್ತು ಆ ಪೈಕಿ 499 ಭರವಸೆಗಳನ್ನು ಈಡೇರಿಸಿದ್ದೇವೆ. 2019 ರಲ್ಲಿ, ನಾವು 235 ಭರವಸೆಗಳನ್ನು ನೀಡಿದ್ದೇವೆ ಮತ್ತು 225 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವು ಅನುಷ್ಠಾನ ಹಂತದಲ್ಲಿವೆ" ಎಂದರು.

ಮಹಿಳೆಯರ ಸಬಲೀಕರಣವು ಬಿಜೆಪಿಯ ಆದ್ಯತೆಯಾಗಿದೆ ಎಂದ ನಡ್ಡಾ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಂತೆ ದೆಹಲಿಯಲ್ಲಿಯೂ ನಾವು ಮಹಿಳೆಯರಿಗೆ ತಿಂಗಳಿಗೆ 2500 ರೂಪಾಯಿ ನೀಡುತ್ತೇವೆ ಮತ್ತು 500 ರೂ. ಗೆ ಎಲ್‌ಪಿಜಿ ಸಿಲಿಂಡರ್‌ ನೀಡುವುದಾಗಿಯೂ ಭರವಸೆ ನೀಡಿದರು.

ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಭರವಸೆಗಳು

  • ಮಹಿಳಾ ಸಮೃದ್ಧಿ ಯೋಜನೆಯಡಿ ದೆಹಲಿಯ ಮಹಿಳೆಯರಿಗೆ 2,500 ರೂ.

  • ದೆಹಲಿಯ ಬಡ ಮಹಿಳೆಯರಿಗೆ 500 ರೂ.ಗೆ ಎಲ್ ಪಿಜಿ ಸಿಲಿಂಡರ್

  • ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿ ತಾಯಂದಿರಿಗೆ 21,000 ರೂ. ನೀಡಲಾಗುವುದು.

  • ಮೊದಲ ಸಂಪುಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನ, ಹೆಚ್ಚುವರಿ ಆರೋಗ್ಯ ರಕ್ಷಣೆಗೆ 50,000 ರೂ.

  • 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,000-2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ.ಗಳನ್ನು ಪಡೆಯುವ ಪಿಂಚಣಿ ಯೋಜನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT