ಸೈಫ್ ಅಲಿಖಾನ್ ಕುಟುಂಬ ಹಾಗೂ ಆರೋಪಿ. 
ದೇಶ

ಸೈಫ್ ಅಲಿ ಖಾನ್ ಮೇಲಿನ ದಾಳಿ ಹಿಂದೆ ಯಾವುದೇ ಗ್ಯಾಂಗ್ ಇಲ್ಲ: ಮಹಾರಾಷ್ಟ್ರ ಗೃಹ ಸಚಿವ

ನಟನ ಮೇಲಿನ ದಾಳಿಯ ಹಿಂದಿನ ಏಕೈಕ ಉದ್ದೇಶ ಕಳ್ಳತನವಾಗಿದೆ ಎಂದು ಕದಮ್ ಸ್ಪಷ್ಟಪಡಿಸಿದರು.

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ಚಾಕು ದಾಳಿಯ ಹಿಂದೆ ಯಾವುದೇ ಭೂಗತ ಪಾತಕಿಗಳ ಗ್ಯಾಂಗ್ ಇಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಯೋಗೇಶ್ ಕದಮ್ ಅವರು ಶುಕ್ರವಾರ ಹೇಳಿದ್ದಾರೆ.

"ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾದ ಶಂಕಿತ ವ್ಯಕ್ತಿ ಯಾವುದೇ ಗ್ಯಾಂಗ್‌ಗೆ ಸೇರಿಲ್ಲ. ಯಾವುದೇ ಗ್ಯಾಂಗ್ ಈ ದಾಳಿಯನ್ನು ನಡೆಸಿಲ್ಲ" ಎಂದು ಕದಮ್ ಅವರು ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

"ಸೈಫ್ ಅಲಿ ಖಾನ್ ಅವರಿಗೆ ಯಾವುದೇ ಬೆದರಿಕೆ ಇರುವ ಬಗ್ಗೆ ಇಲ್ಲಿಯವರೆಗೂ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ ಮತ್ತು ಅವರು ಯಾವುದೇ ಭದ್ರತೆಯನ್ನು ಕೋರಿಲ್ಲ. ಆದರೆ ಅವರು ಭದ್ರತೆ ಕೇಳಿದರೆ, ನಾವು ಸೂಕ್ತ ಕಾರ್ಯವಿಧಾನವನ್ನು ಅನುಸರಿಸುತ್ತೇವೆ" ಎಂದು ಸಚಿವರು ಹೇಳಿದರು.

ನಟನ ಮೇಲಿನ ದಾಳಿಯ ಹಿಂದಿನ ಏಕೈಕ ಉದ್ದೇಶ ಕಳ್ಳತನವಾಗಿದೆ ಎಂದು ಕದಮ್ ಸ್ಪಷ್ಟಪಡಿಸಿದರು.

ಮುಂಬೈ ಪೊಲೀಸರು ಶಂಕಿತ ದಾಳಿಕೋರ ಕಟ್ಟಡದಿಂದ ಪರಾರಿಯಾಗುತ್ತಿದ್ದಾಗ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಕದಮ್ ಹೇಳಿದರು.

ಬಂಧಿತ ವ್ಯಕ್ತಿಗೆ ಕ್ರಿಮಿನಲ್ ಹಿನ್ನೆಲೆ ಇದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ನಟನ ಮೇಲೆ ನಡೆದ ಚಾಕು ಇರಿತ ಪ್ರಕರಣ ಬಾಲಿವುಡ್ ಅನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ. ಚೂರಿ ಇರಿತದಿಂದಾಗಿ ಸೈಫ್ ಅಲಿಖಾನ್ ಅವರ ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯವಾಗಿದೆ.

ಗಂಭೀರ ಗಾಯಗಳಿಂದ ಬಳಲುತ್ತಿರುವ ಸೈಫ್​ ಅಲಿ ಅವರಿಗೆ, ಕೆಲ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT