ಸೈಫ್ ಅಲಿಖಾನ್ ಕುಟುಂಬ ಹಾಗೂ ಆರೋಪಿ. 
ದೇಶ

ಸೈಫ್ ಅಲಿ ಖಾನ್ ಮೇಲಿನ ದಾಳಿ ಹಿಂದೆ ಯಾವುದೇ ಗ್ಯಾಂಗ್ ಇಲ್ಲ: ಮಹಾರಾಷ್ಟ್ರ ಗೃಹ ಸಚಿವ

ನಟನ ಮೇಲಿನ ದಾಳಿಯ ಹಿಂದಿನ ಏಕೈಕ ಉದ್ದೇಶ ಕಳ್ಳತನವಾಗಿದೆ ಎಂದು ಕದಮ್ ಸ್ಪಷ್ಟಪಡಿಸಿದರು.

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ಚಾಕು ದಾಳಿಯ ಹಿಂದೆ ಯಾವುದೇ ಭೂಗತ ಪಾತಕಿಗಳ ಗ್ಯಾಂಗ್ ಇಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಯೋಗೇಶ್ ಕದಮ್ ಅವರು ಶುಕ್ರವಾರ ಹೇಳಿದ್ದಾರೆ.

"ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾದ ಶಂಕಿತ ವ್ಯಕ್ತಿ ಯಾವುದೇ ಗ್ಯಾಂಗ್‌ಗೆ ಸೇರಿಲ್ಲ. ಯಾವುದೇ ಗ್ಯಾಂಗ್ ಈ ದಾಳಿಯನ್ನು ನಡೆಸಿಲ್ಲ" ಎಂದು ಕದಮ್ ಅವರು ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

"ಸೈಫ್ ಅಲಿ ಖಾನ್ ಅವರಿಗೆ ಯಾವುದೇ ಬೆದರಿಕೆ ಇರುವ ಬಗ್ಗೆ ಇಲ್ಲಿಯವರೆಗೂ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ ಮತ್ತು ಅವರು ಯಾವುದೇ ಭದ್ರತೆಯನ್ನು ಕೋರಿಲ್ಲ. ಆದರೆ ಅವರು ಭದ್ರತೆ ಕೇಳಿದರೆ, ನಾವು ಸೂಕ್ತ ಕಾರ್ಯವಿಧಾನವನ್ನು ಅನುಸರಿಸುತ್ತೇವೆ" ಎಂದು ಸಚಿವರು ಹೇಳಿದರು.

ನಟನ ಮೇಲಿನ ದಾಳಿಯ ಹಿಂದಿನ ಏಕೈಕ ಉದ್ದೇಶ ಕಳ್ಳತನವಾಗಿದೆ ಎಂದು ಕದಮ್ ಸ್ಪಷ್ಟಪಡಿಸಿದರು.

ಮುಂಬೈ ಪೊಲೀಸರು ಶಂಕಿತ ದಾಳಿಕೋರ ಕಟ್ಟಡದಿಂದ ಪರಾರಿಯಾಗುತ್ತಿದ್ದಾಗ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಕದಮ್ ಹೇಳಿದರು.

ಬಂಧಿತ ವ್ಯಕ್ತಿಗೆ ಕ್ರಿಮಿನಲ್ ಹಿನ್ನೆಲೆ ಇದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ನಟನ ಮೇಲೆ ನಡೆದ ಚಾಕು ಇರಿತ ಪ್ರಕರಣ ಬಾಲಿವುಡ್ ಅನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ. ಚೂರಿ ಇರಿತದಿಂದಾಗಿ ಸೈಫ್ ಅಲಿಖಾನ್ ಅವರ ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯವಾಗಿದೆ.

ಗಂಭೀರ ಗಾಯಗಳಿಂದ ಬಳಲುತ್ತಿರುವ ಸೈಫ್​ ಅಲಿ ಅವರಿಗೆ, ಕೆಲ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT