ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ: ಕೊರೆಯುವ ಚಳಿ, ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ ಬೆಳಗ್ಗೆ ಏಳಲೇ ಇಲ್ಲ!

ರಾತ್ರಿ 11 ಗಂಟೆ ಸುಮಾರಿಗೆ ಚಳಿಯಿಂದಾಗಿ ತೀವ್ರ ಚಳಿಯಿಂದಾಗಿ ಕೊಠಡಿ ಒಳಗಡೆ ಇದ್ದ ಒಲೆಗೆ ಬೆಂಕಿ ಹಾಕಿ ಮಲಗಿದ್ದು, ಬಾಗಿಲು ಮುಚ್ಚಿದ್ದಾರೆ. ಶುಕ್ರವಾರ ಬೆಳಿಗ್ಗೆ ಅವರ ಮಗ ಅವರನ್ನು ಎಬ್ಬಿಸಲು ಹೋದಾಗ ಯಾರೂ ಬಾಗಿಲು ತೆರೆದಿಲ್ಲ.

ಉತ್ತರಾಖಂಡ: ಕೊರೆಯುವ ಚಳಿಗೆ ಕೊಠಡಿಯ ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್‌ನ ನ್ಯೂ ತೆಹ್ರಿಯ ಹಳ್ಳಿಯೊಂದರಲ್ಲಿ ನಡೆದಿದೆ.

ಭಿಲಂಗಾನ ಪ್ರದೇಶದ ದ್ವಾರಿ-ಥಾಪ್ಲಾ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ದಂಪತಿಗಳಾದ ಮದನ್ ಮೋಹನ್ ಸೆಮ್ವಾಲ್ (52) ಮತ್ತು ಅವರ ಪತ್ನಿ ಯಶೋದಾ ದೇವಿ (48) ಮೃತಪಟ್ಟಿದ್ದಾರೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಲು ಅವರು ಗ್ರಾಮಕ್ಕೆ ಬಂದಿದ್ದರು ಎಂದು ದ್ವಾರಿ-ಥಾಪ್ಲಾ ಗ್ರಾಮದ ಆಡಳಿತಾಧಿಕಾರಿ ರಿಂಕಿ ದೇವಿ ತಿಳಿಸಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಚಳಿಯಿಂದಾಗಿ ತೀವ್ರ ಚಳಿಯಿಂದಾಗಿ ಕೊಠಡಿ ಒಳಗಡೆ ಇದ್ದ ಒಲೆಗೆ ಬೆಂಕಿ ಹಾಕಿ ಮಲಗಿದ್ದು, ಬಾಗಿಲು ಮುಚ್ಚಿದ್ದಾರೆ. ಶುಕ್ರವಾರ ಬೆಳಿಗ್ಗೆ ಅವರ ಮಗ ಅವರನ್ನು ಎಬ್ಬಿಸಲು ಹೋದಾಗ ಯಾರೂ ಬಾಗಿಲು ತೆರೆದಿಲ್ಲ. ಸ್ವಲ್ಪ ಸಮಯದವರೆಗೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಸ್ಥಳೀಯರು ಬಾಗಿಲು ಮುರಿದು ತೆರೆದಾಗ ದಂಪತಿಗಳು ಹಾಸಿಗೆಯ ಮೇಲೆ ಶವವಾಗಿ ಪತ್ತೆದರು ಅವರು ಹೇಳಿದರು.

ಒಲೆಯ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ಅನಿಲದಿಂದಾಗಿ ಅವರು ಸಾವನ್ನಪ್ಪಿದ್ದಾರೆ.ಆದರೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿಲ್ಲ. ದಂಪತಿಯ ಮಗ ಮತ್ತು ಮಗಳೊಂದಿಗೆ ಮಾತುಕತೆ ನಡೆಸಿದ ನಂತರ, ಅವರು ಘಾಟ್‌ನಲ್ಲಿ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ.

ಸೆಮ್ವಾಲ್ ಅವರು ಸರಸ್ವತಿಸೈನ್‌ನ ಸರ್ಕಾರಿ ಇಂಟರ್ ಕಾಲೇಜಿನಲ್ಲಿ ಗುಮಾಸ್ತರಾಗಿದ್ದರು ಎಂದು ಗ್ರಾಮದ ಆಡಳಿತಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT