ಅಮನ್ ಜೈಸ್ವಾಲ್  
ದೇಶ

ಮುಂಬೈ ರಸ್ತೆ ಅಪಘಾತ: ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ

ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮುಂಬೈ: 'ಧರ್ತಿಪುತ್ರ ನಂದಿನಿ' ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೂಲತಃ ಉತ್ತರ ಪ್ರದೇಶದ ಅಮನ್ ಜೈಸ್ವಾಲ್ ಅವರು ಧರ್ತಿಪುತ್ರ ನಂದಿನಿ ಚಿತ್ರದ ಪ್ರಮುಖ ಪಾತ್ರಕ್ಕಾಗಿ ಖ್ಯಾತಿಯನ್ನು ಗಳಿಸಿದರು. ರವಿ ದುಬೆ ಮತ್ತು ಸರ್ಗುನ್ ಮೆಹ್ತಾ ನಿರ್ಮಿಸಿದ ಜನಪ್ರಿಯ ಶೋ ಉದಯನ್‌ನಲ್ಲಿ ಕಾಣಿಸಿಕೊಳ್ಳುವ ಮೊದಲು ಅವರು ಮಾಡೆಲ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

ಡಿಪ್ರೆಷನ್, ಮಧ್ಯಪಾನ, ಆತ್ಮ*ತ್ಯೆ, ಮಗಳ ಕೊಟ್ಟು ಮದುವೆ ಮಾಡಲು ಸಿದ್ಧರಿರಲಿಲ್ಲ: ಭಾರತ ತಂಡದ ಮಾಜಿ ಕ್ರಿಕೆಟಿಗ ಆಳಲು

SCROLL FOR NEXT