ಪ್ರಾತಿನಿಧಿಕ ಚಿತ್ರ 
ದೇಶ

ಛತ್ತೀಸ್‌ಗಢ: ಸೌದೆ ತರಲು ಕಾಡಿಗೆ ಹೋಗಿದ್ದವರ ಮೇಲೆ ಕರಡಿ ದಾಳಿ; ತಂದೆ-ಮಗ ದಾರುಣ ಸಾವು, ಇಬ್ಬರಿಗೆ ಗಾಯ

ಸುಕ್ಲಾಲ್ ದಾರೋ (45) ಮತ್ತು ಅಜ್ಜು ಕುರೇಟಿ (22) ಜೈಲ್‌ನಕಾಸಾ ಬೆಟ್ಟದ ಅರಣ್ಯದಲ್ಲಿ ಸೌದೆಗಳನ್ನು ಸಂಗ್ರಹಿಸಲು ತೆರಳಿದಾಗ ಕರಡಿ ಮೊದಲು ದಾಳಿ ಮಾಡಿದೆ.

ಕಂಕೇರ್: ಛತ್ತೀಸಗಢದ ಕಂಕೇರ್ ಜಿಲ್ಲೆಯಲ್ಲಿ ಕರಡಿಯೊಂದು ದಾಳಿ ನಡೆಸಿದ್ದರಿಂದ ಓರ್ವ ವ್ಯಕ್ತಿ ಮತ್ತು ಆತನ ಮಗ ಸಾವಿಗೀಡಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕೋರರ್ ಅರಣ್ಯ ವ್ಯಾಪ್ತಿಯ ಡೊಂಗರಕಟ್ಟಾ ಗ್ರಾಮದ ಬಳಿಯ ಗುಡ್ಡದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಕ್ಲಾಲ್ ದಾರೋ (45) ಮತ್ತು ಅಜ್ಜು ಕುರೇಟಿ (22) ಜೈಲ್‌ನಕಾಸಾ ಬೆಟ್ಟದ ಅರಣ್ಯದಲ್ಲಿ ಸೌದೆಗಳನ್ನು ಸಂಗ್ರಹಿಸಲು ತೆರಳಿದಾಗ ಕರಡಿ ಮೊದಲು ದಾಳಿ ಮಾಡಿದೆ ಎಂದು ಅವರು ಹೇಳಿದರು.

ದಾರೋ ಸ್ಥಳದಲ್ಲೇ ಮೃತಪಟ್ಟರೆ, ಕುರೇಟಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ಹೇಳಿದರು.

ಅರಣ್ಯ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ದಾರೋರ ಶವವನ್ನು ಹೊರತೆಗೆಯುತ್ತಿದ್ದಾಗ, ಕರಡಿ ಮತ್ತೆ ದಾಳಿ ನಡೆಸಿದೆ. ಈ ವೇಳೆ ದಾರೋ ಅವರ ತಂದೆ ಶಂಕರ್ ದಾರೋ ಅವರನ್ನು ಕೊಂದಿದೆ ಎಂದು ಅಧಿಕಾರಿ ಹೇಳಿದರು.

ದಾಳಿಯಲ್ಲಿ ಅರಣ್ಯ ಸಿಬ್ಬಂದಿ ನಾರಾಯಣ ಯಾದವ್ ಅವರ ಕೈಗೂ ಗಾಯಗಳಾಗಿವೆ. ಬಳಿಕ ಅಧಿಕಾರಿಗಳು ಜೆಸಿಬಿ ಬಳಸಿ ಶವಗಳನ್ನು ಕಾಡಿನಿಂದ ಹೊರಗೆ ತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಡಿ ಚಲನವಲನದ ಮೇಲೆ ನಿಗಾ ಇಡಲು ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಗ್ರಾಮಸ್ಥರು ಅರಣ್ಯಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT