ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 
ದೇಶ

₹ 250 ಮೌಲ್ಯದ ಹಾಲು ನಷ್ಟ; ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಬಿಹಾರದ ವ್ಯಕ್ತಿ

ಸೋನುಪುರ್ ಗ್ರಾಮದ ನಿವಾಸಿಯಾಗಿರುವ ಚೌಧರಿ ಅವರು, ರೋಸೆರಾ ಉಪವಿಭಾಗದ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಮಾಧ್ಯಮಗಳಿಗೆ ತೋರಿಸಿದರು.

ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತನ್ನ ಒಂದು ಲೋಟ ಹಾಲು ಕೆಳಗೆ ಬೀಳುವಂತೆ ಮಾಡಿದ್ದಾರೆ. ಇದರಿಂದ ನನಗೆ ₹ 250 ನಷ್ಟವಾಗಿದೆ ಎಂದು ಆರೋಪಿಸಿ ಬಿಹಾರದ ನಿವಾಸಿಯೊಬ್ಬರು ಸ್ಥಳೀಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ವಿಲಕ್ಷಣ ಘಟನೆ ವರದಿಯಾಗಿದೆ.

ಸಮಸ್ತಿಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ವಾರ ರಾಹುಲ್ ಗಾಂಧಿಯವರ ''ಇಂಡಿಯನ್ ಸ್ಟೇಟ್' ವಿರುದ್ಧ ಹೋರಾಟ" ಎಂಬ ಹೇಳಿಕೆಯನ್ನು ಕೇಳಿ ಆಘಾತವಾಯಿತು ಎಂದು ದೂರುದಾರ ಮುಖೇಶ್ ಚೌಧರಿ ಹೇಳಿದ್ದಾರೆ.

'ರಾಹುಲ್ ಅವರ ಹೇಳಿಕೆಯನ್ನು ಕೇಳಿ ನಾನು ಆಘಾತದ ಸ್ಥಿತಿಯಲ್ಲಿದ್ದಾಗ ನನ್ನ ಕೈಯಲ್ಲಿದ್ದ 5 ಲೀಟರ್ ಹಾಲು ತುಂಬಿದ್ದ ಬಕೆಟ್ ಕೆಳಗೆ ಬಿತ್ತು. ಪ್ರತಿ ಲೀಟರ್‌ ಹಾಲಿಗೆ 50 ರೂ. ಬೆಲೆಯಿದೆ. ರಾಹುಲ್ ಗಾಂಧಿ ರಾಷ್ಟ್ರದ ಸಾರ್ವಭೌಮತೆಗೆ ಧಕ್ಕೆ ತರುತ್ತಿದ್ದಾರೆ' ಎಂದು ಚೌಧರಿ ಆರೋಪಿಸಿದ್ದಾರೆ.

ಸೋನುಪುರ್ ಗ್ರಾಮದ ನಿವಾಸಿಯಾಗಿರುವ ಚೌಧರಿ ಅವರು, ರೋಸೆರಾ ಉಪವಿಭಾಗದ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಮಾಧ್ಯಮಗಳಿಗೆ ತೋರಿಸಿದರು. ದೇಶದ್ರೋಹಕ್ಕೆ ಸಂಬಂಧಿಸಿದ 152 ಸೇರಿದಂತೆ ವಿವಿಧ BNS ಸೆಕ್ಷನ್‌ಗಳ ಅಡಿಯಲ್ಲಿ ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆಯೇ ಎಂಬುದು ತಿಳಿದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT