ಬಂಧಿತ ಆರೋಪಿ ಜತ ಪೊಲೀಸರು 
ದೇಶ

ಚಾಕು ಇರಿತ ಪ್ರಕರಣ: ಸೈಫ್ ಅಲಿ ಖಾನ್ ಮನೆಗೆ ಆರೋಪಿ ಕರೆದೊಯ್ದು ಘಟನೆ ಮರುಸೃಷ್ಟಿಸಿದ ಪೊಲೀಸರು

20 ಅಧಿಕಾರಿಗಳ ತಂಡ ಇಂದು ಬೆಳಗ್ಗೆ 5.30 ರ ಸುಮಾರಿಗೆ ನಾಲ್ಕು ಪೊಲೀಸ್ ವ್ಯಾನ್‌ಗಳಲ್ಲಿ ಸದ್ಗುರು ಶರಣ್ ಅಪಾರ್ಟ್ ಮೆಂಟ್ ಗೆ ತೆರಳಿತ್ತು.

ಮುಂಬೈ: ಮುಂಬೈ ಪೊಲೀಸರು ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಆರೋಪಿಯನ್ನು ಮಂಗಳವಾರ ಬಾಂದ್ರಾದಲ್ಲಿರುವ ನಟನ ನಿವಾಸಕ್ಕೆ ಕರೆದೊಯ್ದು, ಅಪರಾಧದ ಕೃತ್ಯವನ್ನು ಮರುಸೃಷ್ಟಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

20 ಅಧಿಕಾರಿಗಳ ತಂಡ ಇಂದು ಬೆಳಗ್ಗೆ 5.30 ರ ಸುಮಾರಿಗೆ ನಾಲ್ಕು ಪೊಲೀಸ್ ವ್ಯಾನ್‌ಗಳಲ್ಲಿ ಸದ್ಗುರು ಶರಣ್ ಅಪಾರ್ಟ್ ಮೆಂಟ್ ಗೆ ತೆರಳಿತ್ತು ಮತ್ತು ಒಂದು ಗಂಟೆಯ ಕಾಲ ಘಟನೆಯನ್ನು ಮರು ಸೃಷ್ಟಿಸಿದರು ಎಂದು ಅಧಿಕಾರಿ ಹೇಳಿದ್ದಾರೆ.

ಪೊಲೀಸ್ ತಂಡವು ಆರೋಪಿ, ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ನೊಂದಿಗೆ ಮುಂಭಾಗದ ಗೇಟ್ ಮೂಲಕ ಅಪಾರ್ಟ್ ಮೆಂಟ್ ಪ್ರವೇಶಿಸಿತು ಎಂದು ಅವರು ತಿಳಿಸಿದ್ದಾರೆ.

ನಂತರ, ಆರೋಪಿಯನ್ನು ಬಾಂದ್ರಾ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆರೋಪಿ ದಾದರ್‌ಗೆ ರೈಲಿನಲ್ಲಿ ಹೋಗಿದ್ದನು ಮತ್ತು ದಾಳಿಯ ನಂತರ ಆರೋಪಿ ಮಲಗಿದ್ದ ಉದ್ಯಾನದ ಹೊರಗಿನ ಸ್ಥಳಕ್ಕೂ ಪೊಲೀಸರು ಕರೆದೊಯ್ದು ವಿಚಾರಣೆ ನಡೆಸಿದರು.

ಜನವರಿ 16 ರಂದು ಕಳ್ಳತನ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿದ್ದ ಆರೋಪಿ, ನಟನಿಗೆ ಚಾಕುವಿನಿಂದ ಆರು ಬಾರಿ ಇರಿದಿದ್ದನು.

ವಿಜಯ್ ದಾಸ್ ಎಂದು ಹೆಸರು ಬದಲಾಯಿಸಿಕೊಂಡು ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆ ಫಕೀರ್ ನನ್ನು ಪೊಲೀಸರು ಭಾನುವಾರ ನೆರೆಯ ಥಾಣೆಯಲ್ಲಿ ಬಂಧಿಸಿದ್ದರು.

ಬಾಂದ್ರಾದಲ್ಲಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT