ಎನ್ ಆರ್ ನಾರಾಯಣ ಮೂರ್ತಿ  
ದೇಶ

NR Narayana Murthy: 'ಇನ್ಫೋಸಿಸ್ ಆರಂಭದಲ್ಲಿ ಬೆಳಗ್ಗೆ 6.20ಕ್ಕೆ ಕಚೇರಿಗೆ ಹೋಗಿ ರಾತ್ರಿ 8.30ಕ್ಕೆ ಮನೆಗೆ ಬರುತ್ತಿದ್ದೆ, ಹೀಗೆ 40 ವರ್ಷ ಮಾಡಿದ್ದೇನೆ'

ಮುಂಬೈನಲ್ಲಿ ನಡೆದ ಕಿಲಾಚಂದ್ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡಿದ ನಾರಾಯಣ ಮೂರ್ತಿ, "ನೀವು ಒಬ್ಬರಿಗೆ ಇದನ್ನು ಮಾಡಿ, ಇದನ್ನು ಮಾಡಬೇಡಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮುಂಬೈ: ದೇಶದ ಯುವಜನತೆ ವಾರಕ್ಕೆ 70 ಗಂಟೆ ದುಡಿದು ತಮ್ಮ ವೃತ್ತಿಜೀವನದಲ್ಲಿ ಮುಂದೆ ಬರಬೇಕು, ಈ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂಬರ್ಥದಲ್ಲಿ ಹೇಳಿಕೆ ನೀಡಿ ಸುದ್ದಿಯಾಗಿದ್ದರು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ. ಇದೀಗ ತಾವು ಹಿಂದೆ ನೀಡಿದ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ವ್ಯಕ್ತಿಗೆ ಇಷ್ಟು ಹೊತ್ತು ಕೆಲಸ ಮಾಡಬೇಕು ಎಂದು ಬದ್ಧತೆಯನ್ನು ಒತ್ತಾಯಪೂರ್ವಕವಾಗಿ ಹೇರಬಾರದು ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಕಿಲಾಚಂದ್ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡಿದ ನಾರಾಯಣ ಮೂರ್ತಿ, "ನೀವು ಪ್ರತಿಯೊಬ್ಬರಿಗೂ ಇದನ್ನು ಮಾಡಿ, ಇದನ್ನು ಮಾಡಬೇಡಿ ಎಂದು ಹೇಳಲು ಸಾಧ್ಯವಿಲ್ಲ, ಬಲವಂತ ಹೇರಲು ಹೋಗಬಾರದು'' ಎಂದು ಹೇಳಿದ್ದಾರೆ.

ವೈಯಕ್ತಿಕ ಆಯ್ಕೆ, ಸಾರ್ವಜನಿಕ ಚರ್ಚೆ ವಿಷಯವಲ್ಲ

ಇದೇ ಸಮಯದಲ್ಲಿ ನಾರಾಯಣ ಮೂರ್ತಿಯವರು ಇನ್ಫೋಸಿಸ್ ನ ಆರಂಭಿಕ ದಿನಗಳಲ್ಲಿ ತಮ್ಮ ವೈಯಕ್ತಿಕ ಕೆಲಸದ ಬಗ್ಗೆ ಒಳನೋಟಗಳನ್ನು ಹಂಚಿಕೊಂಡರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ನಾನು ಬೆಳಗ್ಗೆ 6:20 ಕ್ಕೆ ಕಚೇರಿಗೆ ಹೋಗಿ ರಾತ್ರಿ 8:30 ಕ್ಕೆ ಮನೆಗೆ ವಾಪಸ್ಸಾಗುತ್ತಿದ್ದೆ. ಸುಮಾರು 40 ವರ್ಷ ಹೀಗೆಯೇ ಮಾಡಿದ್ದೇನೆ. ಹಾಗೆಂದು ಕೆಲಸ ಮಾಡುವ ಸಮಯ ವೈಯಕ್ತಿಕ ಆಯ್ಕೆ, ಅದನ್ನು ಯಾರೂ ನಿರ್ದೇಶಿಸಬಾರದು ಎಂದರು.

ಕೆಲಸದ ಸಮಯವು ವೈಯಕ್ತಿಕ ನಿರ್ಧಾರಗಳಾಗಿವೆ, ಸಾರ್ವಜನಿಕ ಚರ್ಚೆಗೆ ಸಂಬಂಧಿಸಿದ ವಿಷಯಗಳಲ್ಲ. ಇವು ಚರ್ಚಿಸಬೇಕಾದ ವಿಷಯಗಳಲ್ಲ. ನಾವು ಆತ್ಮಾವಲೋಕನ ಮಾಡಿಕೊಳ್ಳಬಹುದಾದ, ಗ್ರಹಿಸಬಹುದಾದ ಮತ್ತು ಕೆಲವು ತೀರ್ಮಾನಕ್ಕೆ ಬರಬಹುದಾದ, ಬಯಸಿದ್ದನ್ನು ಮಾಡಬಹುದಾದ ವಿಷಯಗಳಾಗಿವೆ ಎಂದು ಹೇಳಿದರು, ಕೆಲಸ-ವೈಯಕ್ತಿಕ ಜೀವನದ ಸಮತೋಲನಕ್ಕೆ ಹೆಚ್ಚು ಆತ್ಮಾವಲೋಕನ ಅಗತ್ಯ ಎಂದರು.

ಕೆಲಸ-ಜೀವನ ಸಮತೋಲನ ಚರ್ಚೆ

ವಾರಕ್ಕೆ 70 ಗಂಟೆಗಳ ಕೆಲಸದ ಕುರಿತು ಮೂರ್ತಿಯವರ ಹೇಳಿಕೆಗಳು ಕಾರ್ಪೊರೇಟ್ ಸಂಸ್ಕೃತಿಯ ಬಗ್ಗೆ ವಿಶಾಲವಾದ ಚರ್ಚೆಯನ್ನು ಹುಟ್ಟುಹಾಕಿದವು, ಹಲವಾರು ಉದ್ಯಮ ನಾಯಕರು ಪ್ರತಿಕ್ರಿಯಿಸಿದರು. ಲಾರ್ಸೆನ್ & ಟೂಬ್ರೊ (ಎಲ್ & ಟಿ) ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ವಾರಕ್ಕೆ 90 ಗಂಟೆ ದುಡಿಯಬೇಕೆಂದು ಹೇಳಿದರು. ನಿಮ್ಮನ್ನು ಭಾನುವಾರ ಕೆಲಸ ಮಾಡಲು ಹೇಳಲು ಸಾಧ್ಯವಾಗುತ್ತಿಲ್ಲವಲ್ಲಾ ಎಂದು ವಿಷಾದವಾಗುತ್ತಿದೆ ಎಂದು ಸಹ ಹೇಳಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದವು.

ಮತ್ತೊಂದೆಡೆ, ಬಿಲಿಯನೇರ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಕೆಲಸ-ಜೀವನ ಸಮತೋಲನದಲ್ಲಿ ವೈಯಕ್ತಿಕ ಆಯ್ಕೆಯ ಮಹತ್ವವನ್ನು ಎತ್ತಿ ತೋರಿಸಿದರು. ನಿಮ್ಮ ಕೆಲಸ-ಜೀವನ ಸಮತೋಲನವನ್ನು ನನ್ನ ಮೇಲೆ ಹೇರಬಾರದು ಅಥವಾ ನಾನು ಕೂಡ ಹೇರಬಾರದು ಎಂದು ಹೇಳಿದ್ದರು.

ಈ ಹೇಳಿಕೆ ಸಾಕಷ್ಟು ಚರ್ಚೆ ವಾದ-ವಿವಾದಗಳನ್ನು ಹುಟ್ಟುಹಾಕಿತು. ಬೆಳವಣಿಗೆ ಮತ್ತು ಯಶಸ್ಸಿಗೆ ತೀವ್ರವಾದ ಸಮರ್ಪಣೆ ಅಗತ್ಯ ಎಂದು ಕೆಲವರು ವಾದಿಸಿದರೆ, ಕೆಲಸದ ಬದ್ಧತೆಗಳೊಂದಿಗೆ ವೈಯಕ್ತಿಕ ಜೀವನವನ್ನು ಸಮತೋಲನಗೊಳಿಸುವುದರಲ್ಲಿ ಯಶಸ್ಸು ಕಂಡುಕೊಳ್ಳುತ್ತಾರೆ ಎಂದು ಕೆಲವರು ಹೇಳಿದರು. ಕೆಲ ಉದ್ಯೋಗಿಗಳು ಹೆಚ್ಚುತ್ತಿರುವ ಕೆಲಸದ ಒತ್ತಡಗಳ ಬಗ್ಗೆ ತಮ್ಮ ಹತಾಶೆ ಮತ್ತು ಕಳವಳಗಳನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT