ಬಾಳಾ ಠಾಕ್ರೆ (ಸಂಗ್ರಹ ಚಿತ್ರ) 
ದೇಶ

ಬಾಳಾ ಠಾಕ್ರೆಗೆ ಭಾರತ ರತ್ನ ನೀಡುವಂತೆ ಶಿವಸೇನೆ(ಯುಬಿಟಿ) ಆಗ್ರಹ

ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ" ಕೆಲವು ವ್ಯಕ್ತಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವನ್ನು ನೀಡಿದೆ ಎಂದು ಆರೋಪಿಸಿದರು.

ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ" ಕೆಲವು ವ್ಯಕ್ತಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವನ್ನು ನೀಡಿದೆ ಎಂದು ಆರೋಪಿಸಿದರು.

"ಆದರೆ ದೇಶದಲ್ಲಿ ನಿಜವಾಗಿಯೂ ಹಿಂದುತ್ವದ ಬೀಜ ಬಿತ್ತಿದ ವ್ಯಕ್ತಿಗೆ ಭಾರತ ರತ್ನವನ್ನೂ ನೀಡಬೇಕು. ಶಿವಸೇನೆ ಸಂಸ್ಥಾಪಕರಿಗೆ ಭಾರತ ರತ್ನ ಏಕೆ ನೀಡಿಲ್ಲ? 'ಹಿಂದೂ ಹೃದಯ ಸಾಮ್ರಾಟ್' ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು. ಇದು ಶಿವಸೇನೆ(ಯುಬಿಟಿ)ಯ ಬೇಡಿಕೆಯಾಗಿದೆ" ಎಂದು ಅವರು ಹೇಳಿದರು.

ಠಾಕ್ರೆ ಅವರ ಜನ್ಮ ಶತಮಾನೋತ್ಸವಕ್ಕೆ ಒಂದು ವರ್ಷ ಬಾಕಿ ಇದೆ. "ಶತಮಾನೋತ್ಸವ ಆರಂಭವಾಗುವ ಮೊದಲು, ಅವರಿಗೆ ಭಾರತ ರತ್ನ ನೀಡುವುದು ಅವಶ್ಯಕ. ನೀವು ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಬೇಕಿಲ್ಲ. ಆದರೆ ಬಾಳಾ-ಸಾಹೇಬ್ ಅವರಿಗೆ ಭಾರತ ರತ್ನ ನೀಡಿದರೆ, ಅದು ವೀರ್ ಸಾವರ್ಕರ್ ಅವರಿಗೆ ನೀಡಿದ ಗೌರವವಾಗುತ್ತದೆ" ಎಂದು ರಾಜ್ಯಸಭಾ ಸದಸ್ಯ ಹೇಳಿದರು.

ಪಕ್ಷದ ಸಹೋದ್ಯೋಗಿ ಮತ್ತು ಮುಂಬೈ ದಕ್ಷಿಣ ಸಂಸದ ಅರವಿಂದ್ ಸಾವಂತ್ ಕೂಡ ಇದೇ ಬೇಡಿಕೆಯನ್ನು ಮಂಡಿಸಿದರು. "ತಾನು ಹಿಂದುತ್ವ ಪರ ಎಂದು ಕರೆದುಕೊಳ್ಳುವ ಕೇಂದ್ರ ಸರ್ಕಾರ, ಠಾಕ್ರೆ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು. ನಾವು ಇದನ್ನು ಬಲವಾಗಿ ಒತ್ತಾಯಿಸುತ್ತೇವೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT