ಭಂಡಾರಾದ ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ 
ದೇಶ

ಮಹಾರಾಷ್ಟ್ರ: ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿ ಸಾವು, ಅವಶೇಷಗಳಡಿ 7 ಜನ ಸಿಲುಕಿರುವ ಶಂಕೆ

ರಕ್ಷಣಾ ಇಲಾಖೆಗೆ ಸಣ್ಣ ಪ್ರಮಾಣದ ಶಸ್ತಾಸ್ತ್ರಗಳನ್ನು ತಯಾರಿಸುವ ಮಹಾರಾಷ್ಟ್ರದ ಭಂದಾರಾ ಜಿಲ್ಲೆಯ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು 8 ಜನ ಮೃತಪಟ್ಟಿದ್ದಾರೆ.

ಭಂಡಾರಾ: ರಕ್ಷಣಾ ಇಲಾಖೆಗೆ ಸಣ್ಣ ಪ್ರಮಾಣದ ಶಸ್ತಾಸ್ತ್ರಗಳನ್ನು ತಯಾರಿಸುವ ಮಹಾರಾಷ್ಟ್ರದ ಭಂದಾರಾ ಜಿಲ್ಲೆಯ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು 8 ಜನ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಜವಾಹರ್ ನಗರದಲ್ಲಿನ ರಕ್ಷಣಾ ಇಲಾಖೆ ಕಾರ್ಖಾನೆಯ ಘಟಕವೊಂದರ ಮಾಳಿಗೆ ಕಳಚಿ ಬಿದ್ದಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೊಟ್ಲೆ ತಿಳಿಸಿದ್ದಾರೆ.

ಅವಶೇಷಗಳ ಅಡಿ ಇನ್ನೂ 7 ಜನ ಸಿಲುಕಿದ್ದಾರೆ. ಅವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ. ಮೇಲ್ಛಾವಣಿ ಕುಸಿದಿದ್ದು, ಅವಶೇಷಗಳನ್ನು ತೆಗೆಯಲು ಅಗೆಯುವ ಯಂತ್ರವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಜವಾಹರ್ ನಗರ ಪ್ರದೇಶದಲ್ಲಿರುವ ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ವಿಭಾಗದಲ್ಲಿ 14 ನೌಕರರು ಕೆಲಸ ಮಾಡುತ್ತಿದ್ದರು, ಅವರಲ್ಲಿ ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಪಾರುಗಾಣಿಕಾ ಮತ್ತು ವೈದ್ಯಕೀಯ ಸಿಬ್ಬಂದಿ ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದರೆ, ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಸ್ಫೋಟದ ತೀವ್ರತೆ ಎಷ್ಟು ಇತ್ತೆಂದರೆ ಸುಮಾರು 5 ಕಿಮೀ ದೂರದ ವರೆಗೆ ಶಬ್ದ ಕೇಳಿಸಿತು. ಫ್ಯಾಕ್ಟರಿಯಿಂದ ದಟ್ಟ ಹೊಗೆ ಏಳುತ್ತಿರುವುದು ದೂರದಿಂದ ಸೆರೆ ಹಿಡಿದಿರುವ ವಿಡಿಯೋದಲ್ಲಿ ಕಂಡು ಬಂದಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ