ಸಾಂದರ್ಭಿಕ ಚಿತ್ರ 
ದೇಶ

ಹರಿಯಾಣ: ನರೈಂಗರ್‌ನಲ್ಲಿ ಬಿಎಸ್‌ಪಿ ನಾಯಕ ಹರ್ಬಿಲಾಸ್ ಸಿಂಗ್ ರಾಜ್ಜುಮಜ್ರಾನನ್ನು ಗುಂಡಿಕ್ಕಿ ಹತ್ಯೆ

ಪುನೀತ್‌ಗೂ ಗುಂಡೇಟು ತಗುಲಿದೆ. ದಾಳಿಯ ನಂತರ, ಅವರನ್ನು ಚಂಡೀಗಢದ ಪಿಜಿಐಎಂಇಆರ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಹರ್ಬಿಲಾಸ್ ತಡರಾತ್ರಿ ಮೃತಪಟ್ಟರು.

ಅಂಬಾಲಾ: ಹರಿಯಾಣದ ಅಂಬಾಲಾದ ಬಹುಜನ ಸಮಾಜ ಪಕ್ಷದ (BSP) ನಾಯಕ ಹರ್ಬಿಲಾಸ್ ಸಿಂಗ್ ರಜ್ಜುಮಜ್ರಾನನ್ನು ನರೈಂಗರ್‌ನಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಿನ್ನೆ ಶುಕ್ರವಾರ ಸಂಜೆ ಬಿಎಸ್‌ಪಿ ನಾಯಕ ಹರ್ಬಿಲಾಸ್ ಸಿಂಗ್ ರಜ್ಜುಮಜ್ರಾ ಅವರ ಜೊತೆ ಪುನೀತ್ ಮತ್ತು ಗುಗಲ್ ಎಂಬ ಇಬ್ಬರು ಸ್ನೇಹಿತರು ಕಾರಿನಲ್ಲಿ ಕುಳಿತಿದ್ದಾಗ ದಾಳಿ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪುನೀತ್‌ಗೂ ಗುಂಡೇಟು ತಗುಲಿದೆ. ದಾಳಿಯ ನಂತರ, ಅವರನ್ನು ಚಂಡೀಗಢದ ಪಿಜಿಐಎಂಇಆರ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಹರ್ಬಿಲಾಸ್ ತಡರಾತ್ರಿ ಮೃತಪಟ್ಟರು. ಪುನೀತ್ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ದಾಳಿಕೋರರನ್ನು ಇದುವರೆಗೆ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನರೈಂಗಡ್ ಎಸ್ ಹೆಚ್ ಒ ಲಲಿತ್ ಕುಮಾರ್ ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಧಾವಿಸಿದ್ದು, ದಾಳಿಕೋರರನ್ನು ಬಂಧಿಸಲು ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಅಂಬಾಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಎಸ್ ಭೋರಿಯಾ ತಿಳಿಸಿದ್ದಾರೆ.

ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಪೊಲೀಸರು ಎಲ್ಲ ಪ್ರಯತ್ನಗಳನ್ನು ಮಾಡಬೇಕೆಂದು ಅಂಬಾಲಾ ಮೂಲದ ಬಿಎಸ್ಪಿ ನಾಯಕರು ಒತ್ತಾಯಿಸಿದ್ದಾರೆ. ರಾಜ್ಜುಮಜ್ರಾ ಕಳೆದ ವರ್ಷ ನರೈಂಗಡ್ ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT