ದ್ರೌಪದಿ ಮುರ್ಮು 
ದೇಶ

ನಮ್ಮ ಸಂವಿಧಾನ ಜೀವಂತ ದಾಖಲೆಯಾಗಿದೆ: ದೇಶ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ

ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ದ್ರೌಪದಿ ಮುರ್ಮು ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಯಾವಾಗಲೂ ನಮ್ಮ ನಾಗರಿಕತೆಯ ಪರಂಪರೆಯ ಭಾಗವಾಗಿವೆ ಎಂದು ಹೇಳಿದರು.

ನವದೆಹಲಿ: "ನಮ್ಮ ಸಂವಿಧಾನವು ಜೀವಂತ ದಾಖಲೆಯಾಗಿದೆ. ಏಕೆಂದರೆ ನಾಗರಿಕ ಸದ್ಗುಣಗಳು ಸಹಸ್ರಾರು ವರ್ಷಗಳಿಂದ ನಮ್ಮ ನೈತಿಕ ದಿಕ್ಸೂಚಿಯ ಭಾಗವಾಗಿವೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಹೇಳಿದ್ದಾರೆ.

76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ದ್ರೌಪದಿ ಮುರ್ಮು ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಯಾವಾಗಲೂ ನಮ್ಮ ನಾಗರಿಕತೆಯ ಪರಂಪರೆಯ ಭಾಗವಾಗಿವೆ ಎಂದು ಹೇಳಿದರು.

"ಭಾರತೀಯರಾಗಿ ನಮ್ಮ ಸಾಮೂಹಿಕ ಗುರುತಿನ ಅಂತಿಮ ಅಡಿಪಾಯವನ್ನು ಸಂವಿಧಾನ ಒದಗಿಸುತ್ತದೆ. ಇದು ನಮ್ಮನ್ನು ಕುಟುಂಬವಾಗಿ ಒಟ್ಟಿಗೆ ಬಂಧಿಸುತ್ತದೆ" ಎಂದು ರಾಷ್ಟ್ರಪತಿಗಳು ಹೇಳಿದರು.

ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿರುವ ಭಾರತವು ಒಂದು ಕಾಲದಲ್ಲಿ ಜ್ಞಾನ ಮತ್ತು ಬುದ್ಧಿವಂತಿಕೆಯ ಮೂಲವೆಂದು ಕರೆಯಲ್ಪಡುತ್ತಿತ್ತು ಎಂದು ಮುರ್ಮು ತಿಳಿಸಿದರು.

ನಾವು ಪ್ರತಿಕೂಲ ಪರಿಸ್ಥಿತಿಯ ಹೊರತಾಗಿಯೂ ಎಷ್ಟು ದೂರ ಸಾಗಿ ಬಂದಿದ್ದೇವೆ ಎಂಬುದನ್ನು ವಿವರಿಸಿದ ರಾಷ್ಟ್ರಪತಿ ಮುರ್ಮು, ಹಲವಾರು ವರ್ಷಗಳಿಂದ ದೇಶವು ಆರ್ಥಿಕತೆ, ವಿಜ್ಞಾನ, ಅಂತಾರಾಷ್ಟ್ರೀಯ ಬಾಂಧವ್ಯ ಹಾಗೂ ಇನ್ನಿತರ ವಿಷಯಗಳ ಮಾಡಿರುವ ಸಾಧನೆಯನ್ನು ಒತ್ತಿ ಹೇಳಿದರು.

"ಒಂದು ರಾಷ್ಟ್ರ ಒಂದು ಚುನಾವಣೆ" ಉಪಕ್ರಮವು, ಆಡಳಿತದಲ್ಲಿ ಸ್ಥಿರತೆಯನ್ನು ಉತ್ತೇಜಿಸುವ, ಯೋಜನೆಗಳು ದಾರಿ ತಪ್ಪದಂತೆ ತಡೆಯಲಿದೆ ಮತ್ತು ರಾಜ್ಯದ ಮೇಲಿನ ಆರ್ಥಿಕ ಹೊರೆಗಳನ್ನು ಕಡಿಮೆ ಮಾಡುವ ಮೂಲಕ ದೇಶದಲ್ಲಿ "ಉತ್ತಮ ಆಡಳಿತ" ವನ್ನು ಮರು ವ್ಯಾಖ್ಯಾನಿಸುವ ಸಾಮರ್ಥ್ಯ ಹೊಂದಿದೆ ಎಂದು ರಾಷ್ಟ್ರಪತಿಗಳು ಪ್ರತಿಪಾದಿಸಿದರು.

ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ ಪ್ರಸ್ತಾವಿತ ಮಸೂದೆಯ ಮಹತ್ವವನ್ನು ಎತ್ತಿ ತೋರಿಸಿದ ಮುರ್ಮು, "ಒಂದು ರಾಷ್ಟ್ರ ಒಂದು ಚುನಾವಣೆ" ಯೋಜನೆಯು ವರ್ಧಿತ ಆಡಳಿತ ಮತ್ತು ಕಡಿಮೆ ಆರ್ಥಿಕ ಒತ್ತಡ ಸೇರಿದಂತೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT