ನಟ ಸೈಫ್ ಅಲಿಖಾನ್ 
ದೇಶ

ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ತನಿಖೆ ತೀವ್ರ; ಸೈಫ್ ಅಲಿಖಾನ್ ರಕ್ತದ ಮಾದರಿ, ಬಟ್ಟೆ ಸಂಗ್ರಹಿಸಿದ ಪೊಲೀಸರು!

ಶುಕ್ರವಾರ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿಯ ಪೊಲೀಸ್ ಕಸ್ಟಡಿಯನ್ನು ಜನವರಿ 29 ರವರೆಗೆ ವಿಸ್ತರಿಸಿದೆ.

ಮುಂಬೈ: ಕಳೆದ ವಾರ ಮುಂಬೈಯ ತನ್ನ ಮನೆಯಲ್ಲಿಯೇ ನಟ ಸೈಫ್ ಅಲಿಖಾನ್ ಚಾಕು ಇರಿತಕ್ಕೊಳಗಾದ ಘಟನೆ ಕುರಿತು ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಸೇರಿದಂತೆ ಹಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಚಾಕು ಇರಿತ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ನಟ ಸೈಫ್ ಅಲಿಖಾನ್ ಅವರ ರಕ್ತದ ಮಾದರಿ ಮತ್ತು ಬಟ್ಟೆಗಳನ್ನು ಸಂಗ್ರಹಿಸಿದ್ದಾರೆ. ದಾಳಿಯ ವೇಳೆ ಸೈಫ್ ಅಲಿಖಾನ್ ಧರಿಸಿದ್ದ ಬಟ್ಟೆಗಳ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಯ ರಿಮಾಂಡ್ ಪ್ರತಿಯಲ್ಲಿ ತಿಳಿಸಲಾಗಿದೆ.

ಇದಲ್ಲದೇ ಘಟನೆ ನಡೆದ ರಾತ್ರಿ ಆರೋಪಿ ಶರೀಫುಲ್ ಇಸ್ಲಾಂ ಧರಿಸಿದ್ದ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದು, ಇದಕ್ಕಾಗಿ ಸೈಫ್ ಅಲಿ ಖಾನ್ ಅವರ ರಕ್ತದ ಮಾದರಿಯನ್ನೂ ಸಂಗ್ರಹಿಸಲಾಗಿದೆ.

ಸೈಫ್‌ ಅಲಿಖಾನ್ ರಕ್ತದ ಮಾದರಿ, ಬಟ್ಟೆಗಳು ಮತ್ತು ಹಲ್ಲೆ ನಡೆಸಿದ ವ್ಯಕ್ತಿಯ ಬಟ್ಟೆಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದ್ದು, ದಾಳಿಕೋರನ ಬಟ್ಟೆಯ ಮೇಲೆ ಗೋಚರಿಸುವ ರಕ್ತದ ಕಲೆಗಳು ನಟನದ್ದೇ ಎಂದು ಸಾಬೀತುಪಡಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿಯ ಪೊಲೀಸ್ ಕಸ್ಟಡಿಯನ್ನು ಜನವರಿ 29 ರವರೆಗೆ ವಿಸ್ತರಿಸಿದೆ. ಈ ವಿಷಯದಲ್ಲಿ ಸಾಕಷ್ಟು ಪ್ರಗತಿಯಾಗಿದೆ ಮತ್ತು ಇತರ ಪರಿಣಾಮದ ಅಂಶಗಳ ತನಿಖೆ ಅಗತ್ಯ ಎಂದು ನ್ಯಾಯಾಲಯ ಪರಿಗಣಿಸಿದೆ. ಅಪರಾಧ ಗಂಭೀರವಾಗಿದ್ದು, ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆ ನಡೆಯುತ್ತಿದೆ.

ಕಳೆದ ವಾರ ಸೈಫ್ ಅಲಿಖಾನ್ ಮನೆಗೆ ನುಗ್ಗಿದ್ದ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದ. ನಂತರ ಆತನನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದ್ದು, ಕಳ್ಳತನ ಮಾಡುವ ಉದ್ದೇಶದಿಂದ ಆತನ ಮನೆಗೆ ನುಗ್ಗಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಆರೋಪಿಯೊಂದಿಗಿನ ಗಲಾಟೆ ವೇಳೆ ಸೈಫ್ ಅಲಿ ಖಾನ್ ಅವರ ಎದೆಗೂಡಿನ ಬೆನ್ನುಮೂಳೆ ಮತ್ತು ದೇಹದ ಇತರ ಭಾಗಗಳಿಗೆ ಇರಿತದ ಗಾಯಗಳಾಗಿವೆ. ದಾಳಿಯ ನಂತರ ತಕ್ಷಣ ಚಿಕಿತ್ಸೆಗಾಗಿ ನಟವನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT