ತ್ರಿವಳಿ ತಲಾಖ್ online desk
ದೇಶ

ಕೇರಳ: ಫೋನ್ ಮೂಲಕ ಎರಡನೇ ಪತ್ನಿಗೆ ತ್ರಿವಳಿ ತಲಾಖ್; ಪತಿಯನ್ನು ಬಂಧಿಸಿದ ಪೊಲೀಸರು

ಕೊಲ್ಲಂ ಜಿಲ್ಲೆಯ ಮೈನಾಗಪಲ್ಲಿ ಮೂಲದ ಅಬ್ದುಲ್ ಬಸಿತ್ ಎಂಬಾತನನ್ನು ಎರಡು ದಿನಗಳ ಹಿಂದೆ ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊಲ್ಲಂ: ದೂರವಾಣಿ ಮೂಲಕವೇ ಪತ್ನಿಗೆ ತ್ರಿವಳಿ ತಲಾಖ್‌ ನೀಡಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊಲ್ಲಂ ಜಿಲ್ಲೆಯ ಮೈನಾಗಪಲ್ಲಿ ಮೂಲದ ಅಬ್ದುಲ್ ಬಸಿತ್ ಎಂಬಾತನನ್ನು ಎರಡು ದಿನಗಳ ಹಿಂದೆ ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಸಿತ್ ವಿರುದ್ಧ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿಯನ್ನು ಚವಾರ ಉಪ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಕೊಲ್ಲಂ ಜಿಲ್ಲೆಯ ಚವಾರ ನಿವಾಸಿಯಾದ ಆತನ 20 ವರ್ಷದ ಪತ್ನಿ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ.

ದೂರಿನ ಪ್ರಕಾರ, ಬಸಿತ್ ತನ್ನ ಮೊದಲ ಮದುವೆಯನ್ನು ಬಹಿರಂಗಪಡಿಸದೆ ಎರಡನೇ ಮದುವೆಯಾಗಿದ್ದಾನೆ. ಮೊದಲ ಪತ್ನಿ ತನ್ನ ಕುಟುಂಬದ ಮನೆಯಲ್ಲಿಯೇ ಇದ್ದುದರಿಂದ ಎರಡನೇ ಪತ್ನಿಯನ್ನು ಮದುವೆಯಾದ ನಂತರ ಬಾಡಿಗೆ ಮನೆಗೆ ಕರೆದೊಯ್ದಿದ್ದಾನೆ.

ಆತನ ಮೊದಲ ಮದುವೆಯ ಬಗ್ಗೆ ತಿಳಿದಾಗ ಅದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಆತ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾನೆ. ಅಲ್ಲದೆ, ಬೇರೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಬಸಿತ್ ಬೆದರಿಕೆ ಹಾಕಿದ್ದಾನೆ. ಜಗಳದ ನಂತರ ಮಹಿಳೆ ತನ್ನ ಪೋಷಕರ ಮನೆಗೆ ಮರಳಿದ್ದಾರೆ. ಜನವರಿ 19 ರಂದು ಬಸಿತ್ ಆಕೆಗೆ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದು, ತಮ್ಮ ಸಂಬಂಧ ಮುಗಿದಿದೆ ಎಂದು ಘೋಷಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT