ವಿಜಯಸಾಯಿ ರೆಡ್ಡಿ 
ದೇಶ

YSRCP ನಾಯಕ ವಿಜಯಸಾಯಿ ರೆಡ್ಡಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ

ಇದು ನನ್ನ ವೈಯಕ್ತಿಕ ನಿರ್ಧಾರ ಯಾವುದೇ ಒತ್ತಡವಿಲ್ಲ ಎಂದಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಶುಕ್ರವಾರ ರೆಡ್ಡಿ ಘೋಷಿಸಿದ್ದರು.

ನವದೆಹಲಿ: ವೈಎಸ್‌ಆರ್‌ಸಿಪಿ ನಾಯಕ ವಿ. ವಿಜಯಸಾಯಿ ರೆಡ್ಡಿ ಅವರು ವೈಯಕ್ತಿಕ ಕಾರಣ ನೀಡಿ ರಾಜ್ಯಸಭಾ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ನಾನು ನನ್ನ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿ ದಂಖರ್ ಅವರಿಗೆ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬೇರೆ ಯಾವುದೇ ಪಕ್ಷಕ್ಕೆ ಸೇರಲ್ಲ. ರಾಜಕೀಯ ತೊರೆಯುತ್ತಿದ್ದೇನೆ. ನಾನು ಯಾವುದೇ ಸ್ಥಾನ, ಲಾಭ ಅಥವಾ ಹಣಕ್ಕಾಗಿ ರಾಜೀ ನಾಮೆ ನೀಡುತ್ತಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಯಾವುದೇ ಒತ್ತಡವಿಲ್ಲ’ ಎಂದಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಶುಕ್ರವಾರ ರೆಡ್ಡಿ ಘೋಷಿಸಿದ್ದರು.

ರಾಜ್ಯಸಭಾ ಸದಸ್ಯತ್ವದಲ್ಲಿ ಆರು ವರ್ಷಗಳ ಅವಧಿಗೆ ಇನ್ನೂ ಮೂರುವರೆ ವರ್ಷಗಳು ಬಾಕಿ ಉಳಿದಿದ್ದರೂ, ವೈಯಕ್ತಿಕ ಕಾರಣಗಳಿಗಾಗಿ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿರುವುದಾಗಿ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.

ವೈಎಸ್‌ಆರ್‌ಸಿಪಿ ನಾಯಕರು ಪಕ್ಷದ ಏಕತೆಗಾಗಿ ರಾಜಕೀಯದಲ್ಲಿ ಉಳಿಯುವಂತೆ ವಿಜಯಸಾಯಿ ರೆಡ್ಡಿಗೆ ಮನವಿ ಮಾಡಿದ್ದಾರೆ. ವಿ. ವಿಜಯಸಾಯಿ ರೆಡ್ಡಿ ರಾಜೀನಾಮೆ ಘೋಷಿಸಿದ ನಂತರ, ಪಕ್ಷದ ನಾಯಕಿ ಮಡ್ಡಿಲ ಗುರುಮೂರ್ತಿ ಶನಿವಾರ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.

"ಖಂಡಿತವಾಗಿಯೂ, ನಾವೆಲ್ಲರೂ ಅವರು (ವಿಜಯಸಾಯಿ ರೆಡ್ಡಿ) ನಮ್ಮ ಪಕ್ಷದಲ್ಲಿ ಮುಂದುವರಿಯಬೇಕೆಂದು ಬಯಸುತ್ತಿದ್ದೇವೆ. ದಯವಿಟ್ಟು ರಾಜಕೀಯದಿಂದ ನಿರ್ಗಮಿಸಬೇಡಿ. ನಿಮ್ಮಂತಹ ಅನುಭವಿ ವ್ಯಕ್ತಿಗಳು ಪಕ್ಷಕ್ಕೆ ಅವಶ್ಯಕ. ಜಗನ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ವಿನಂತಿಸಿದೆ" ಎಂದು ಗುರುಮೂತಿ ತಿಳಿಸಿದ್ದಾರೆ. ಈ ಮನವಿಗೆ ಪ್ರತಿಕ್ರಿಯಿಸಿರುವ ವಿಜಯಸಾಯಿ ರೆಡ್ಡಿ "ಇದರ ಬಗ್ಗೆ ಯೋಚಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿಯಲ್ಲಿ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ ಎಂದು ಗುರುಮೂರ್ತಿ ಸ್ಪಷ್ಟ ಪಡಿಸಿದರು. ದಿಟ್ಟತನಕ್ಕೆ ಹೆಸರುವಾಸಿಯಾದ ವಿಜಯಸಾಯಿ ರೆಡ್ಡಿ ಯಾವುದೇ ಸವಾಲುಗಳನ್ನು ನಿವಾರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ. ಬಂಪರ್ ಬಹುಮಾನ! ದುಡ್ಡು ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

ICC ವಿರುದ್ಧ ಇಂಗ್ಲೆಂಡ್ ನ ಮಾಜಿ ನಾಯಕ ಮೈಕಲ್ ವಾನ್ ಆಕ್ರೋಶ! ಸ್ಫೋಟಕ ಪೋಸ್ಟ್, ಯಾಕೆ ಗೊತ್ತಾ?

ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ

SCROLL FOR NEXT