ಯೋಗಿ ಆದಿತ್ಯನಾಥ್  
ದೇಶ

ಸನಾತನ ಧರ್ಮ ಬಲಿಷ್ಠವಾಗಿದ್ದರೆ, ಭಾರತ ಬಲಿಷ್ಠವಾಗುತ್ತದೆ: ಯೋಗಿ ಆದಿತ್ಯನಾಥ್

ಮಹಾಕುಂಭದ ಭಾಗವಾಗಿರುವ ಎಲ್ಲಾ ಸಂತರು, ಭಕ್ತರು ಅಥವಾ ಪ್ರವಾಸಿಗರು ಸಹ ಏಕತೆಯ ಸಂದೇಶವನ್ನು ಮುಂದಕ್ಕೆ ಕೊಂಡೊಯ್ದರೆ, ಸನಾತನ ಧರ್ಮ ಬಲಿಷ್ಠವಾಗುತ್ತದೆ.

ಮಹಾಕುಂಭ: ಜನರು ಏಕತೆಯ ಸಂದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕು, ನಮ್ಮ ಸನಾತನ ಧರ್ಮ ಬಲಿಷ್ಠವಾಗಿದ್ದರೆ ದೇಶ ಬಲಿಷ್ಠವಾಗಿರುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ವಿರೋಧ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಜಾತಿ-ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿವೆ. ಹೀಗೆ ಮಾಡುವುದು ದೇಶದ್ರೋಹಕ್ಕಿಂತ ಕಡಿಮೆಯಿಲ್ಲ ಎಂದು ಹೇಳಿದರು.

ರಾಜ್ಯವನ್ನು ನಾಲ್ಕು ಭಾಗಗಳಾಗಿ ವಿಭಜಿಸಬೇಕೆಂಬ ಕೆಲವು ಭಾಗಗಳ ಬೇಡಿಕೆಗೆ ಅವರು ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು, ಉತ್ತರ ಪ್ರದೇಶದ ಸಾಮರ್ಥ್ಯವು ಅದರ ಏಕತೆಯಲ್ಲಿದೆ ಎಂದು ಪ್ರಯಾಗ್ ರಾಜದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಬಗ್ಗೆ ಹೇಳಿದರು.

ಮಹಾಕುಂಭವು ಏಕತೆ ಮತ್ತು ಸಮಗ್ರತೆಯ ಸಂದೇಶ ಸಾರುತ್ತದೆ, ಇದು ಜಗತ್ತಿಗೆ ತಲುಪಬೇಕು. ಮಹಾಕುಂಭದ ಭಾಗವಾಗಿರುವ ಎಲ್ಲಾ ಸಂತರು, ಭಕ್ತರು ಅಥವಾ ಪ್ರವಾಸಿಗರು ಸಹ ಏಕತೆಯ ಸಂದೇಶವನ್ನು ಮುಂದಕ್ಕೆ ಕೊಂಡೊಯ್ದರೆ, ಸನಾತನ ಧರ್ಮ ಬಲಿಷ್ಠವಾಗುತ್ತದೆ. ಸನಾತನ ಧರ್ಮ ಬಲಿಷ್ಠವಾಗಿದ್ದರೆ, ನಮ್ಮ ದೇಶ ಬಲಿಷ್ಠವಾಗಿರುತ್ತದೆ ಎಂದು ಯೋಗಿ ಆದಿತ್ಯನಾಥ್ ಅವರು ಮಹಾಕುಂಭಮೇಳದಲ್ಲಿ "ನ್ಯೂಸ್ 18 ನೆಟ್‌ವರ್ಕ್" ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT