ಯೋಗಿ ಆದಿತ್ಯನಾಥ್  
ದೇಶ

ಸನಾತನ ಧರ್ಮ ಬಲಿಷ್ಠವಾಗಿದ್ದರೆ, ಭಾರತ ಬಲಿಷ್ಠವಾಗುತ್ತದೆ: ಯೋಗಿ ಆದಿತ್ಯನಾಥ್

ಮಹಾಕುಂಭದ ಭಾಗವಾಗಿರುವ ಎಲ್ಲಾ ಸಂತರು, ಭಕ್ತರು ಅಥವಾ ಪ್ರವಾಸಿಗರು ಸಹ ಏಕತೆಯ ಸಂದೇಶವನ್ನು ಮುಂದಕ್ಕೆ ಕೊಂಡೊಯ್ದರೆ, ಸನಾತನ ಧರ್ಮ ಬಲಿಷ್ಠವಾಗುತ್ತದೆ.

ಮಹಾಕುಂಭ: ಜನರು ಏಕತೆಯ ಸಂದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕು, ನಮ್ಮ ಸನಾತನ ಧರ್ಮ ಬಲಿಷ್ಠವಾಗಿದ್ದರೆ ದೇಶ ಬಲಿಷ್ಠವಾಗಿರುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ವಿರೋಧ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಜಾತಿ-ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿವೆ. ಹೀಗೆ ಮಾಡುವುದು ದೇಶದ್ರೋಹಕ್ಕಿಂತ ಕಡಿಮೆಯಿಲ್ಲ ಎಂದು ಹೇಳಿದರು.

ರಾಜ್ಯವನ್ನು ನಾಲ್ಕು ಭಾಗಗಳಾಗಿ ವಿಭಜಿಸಬೇಕೆಂಬ ಕೆಲವು ಭಾಗಗಳ ಬೇಡಿಕೆಗೆ ಅವರು ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು, ಉತ್ತರ ಪ್ರದೇಶದ ಸಾಮರ್ಥ್ಯವು ಅದರ ಏಕತೆಯಲ್ಲಿದೆ ಎಂದು ಪ್ರಯಾಗ್ ರಾಜದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಬಗ್ಗೆ ಹೇಳಿದರು.

ಮಹಾಕುಂಭವು ಏಕತೆ ಮತ್ತು ಸಮಗ್ರತೆಯ ಸಂದೇಶ ಸಾರುತ್ತದೆ, ಇದು ಜಗತ್ತಿಗೆ ತಲುಪಬೇಕು. ಮಹಾಕುಂಭದ ಭಾಗವಾಗಿರುವ ಎಲ್ಲಾ ಸಂತರು, ಭಕ್ತರು ಅಥವಾ ಪ್ರವಾಸಿಗರು ಸಹ ಏಕತೆಯ ಸಂದೇಶವನ್ನು ಮುಂದಕ್ಕೆ ಕೊಂಡೊಯ್ದರೆ, ಸನಾತನ ಧರ್ಮ ಬಲಿಷ್ಠವಾಗುತ್ತದೆ. ಸನಾತನ ಧರ್ಮ ಬಲಿಷ್ಠವಾಗಿದ್ದರೆ, ನಮ್ಮ ದೇಶ ಬಲಿಷ್ಠವಾಗಿರುತ್ತದೆ ಎಂದು ಯೋಗಿ ಆದಿತ್ಯನಾಥ್ ಅವರು ಮಹಾಕುಂಭಮೇಳದಲ್ಲಿ "ನ್ಯೂಸ್ 18 ನೆಟ್‌ವರ್ಕ್" ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT