ಅಖಿಲೇಶ್ ಯಾದವ್ 
ದೇಶ

Maha Kumbh Mela: ತ್ರಿವೇಣಿ ಸಂಗಮದಲ್ಲಿ ಅಖಿಲೇಶ್ ಯಾದವ್ ಪವಿತ್ರ ಸ್ನಾನ!

ಸಂಪ್ರದಾಯದಂತೆ ಸಂಗಮದಲ್ಲಿ 11 ಬಾರಿ ಸ್ನಾನ ಮಾಡುವ ಅವಕಾಶ ಸಿಕ್ಕಿದೆ. 144 ವರ್ಷಗಳ ನಂತರ ಈ ಮಹಾಕುಂಭ ಮೇಳ ನಡೆಯುತ್ತಿದೆ.

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ವೇಳೆ ತ್ರಿವೇಣಿ ಸಂಗಮದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಪವಿತ್ರ ಸ್ನಾನ ಮಾಡಿದ್ದಾರೆ.

ಮಧ್ಯಾಹ್ನ ಮಹಾಕುಂಭ ನಗರಕ್ಕೆ ಆಗಮಿಸಿದ ಯಾದವ್ ಪವಿತ್ರ ಸ್ನಾನ ಮಾಡಿದ್ದಾರೆ. ಈ ಕುರಿತ ಫೋಟೋಗಳನ್ನು ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಸ್ನಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಸಂಪ್ರದಾಯದಂತೆ ಸಂಗಮದಲ್ಲಿ 11 ಬಾರಿ ಸ್ನಾನ ಮಾಡುವ ಅವಕಾಶ ಸಿಕ್ಕಿದೆ. 144 ವರ್ಷಗಳ ನಂತರ ಈ ಮಹಾಕುಂಭ ಮೇಳ ನಡೆಯುತ್ತಿದೆ. ಸಾಮರಸ್ಯ, ಸದ್ಭಾವನೆ ಸಹಿಷ್ಣುತೆಯೊಂದಿಗೆ ಎಲ್ಲರೂ ಮುಂದುವರಿಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದು, ಜನರ ಕಲ್ಯಾಣಕ್ಕಾಗಿ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.

ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಯಾದವ್ ಸ್ನಾನ ಮಾಡಿದ್ದರು.

ಈ ತಿಂಗಳ ಆರಂಭದಲ್ಲಿ ಪ್ರಯಾಗ್‌ರಾಜ್‌ನಲ್ಲಿರುವ ಮಹಾಕುಂಭಕ್ಕೆ ಭೇಟಿ ನೀಡುತ್ತೀರಾ ಎಂಬ ಪ್ರಶ್ನೆಗೆ ಯಾವಾಗಲೂ ಕುಂಭ ಮೇಳಕ್ಕೆ ಹೋಗುತ್ತೇನೆ. ಕೆಲವರು ಪುಣ್ಯ ಪಡೆಯಲು ಗಂಗಾ ಸ್ನಾನಕ್ಕೆ ಹೋಗುತ್ತಾರೆ, ಕೆಲವರು ದಾನ ನೀಡಲು ಹೋಗುತ್ತಾರೆ. ಮತ್ತೆ ಕೆಲವರು ತಮ್ಮ ಪಾಪವನ್ನು ತೊಳೆಯಲು ಹೋಗುತ್ತಾರೆ. ನಾವು ಪುಣ್ಯ ಮತ್ತು ದಾನಕ್ಕಾಗಿ ಹೋಗುತ್ತೇವೆ" ಎಂದು ಅವರು ಹೇಳಿದ್ದರು. 2019 ರಲ್ಲಿ, ಯಾದವ್ ಅರ್ಧ ಕುಂಭದ ಸಮಯದಲ್ಲಿ ಪ್ರಯಾಗರಾಜ್‌ನಲ್ಲಿ ಸ್ನಾನ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT