ಕಸ ಎತ್ತುತ್ತಿರುವ ಪ್ರಧಾನಿ ಮೋದಿ 
ದೇಶ

76ನೇ ಗಣರಾಜ್ಯೋತ್ಸವ: ಪರೇಡ್ ವೇಳೆ ಕರ್ತವ್ಯ ಪಥದಲ್ಲಿ 'ಕಸ' ಎತ್ತಿದ ಪ್ರಧಾನಿ ಮೋದಿ! ವಿಡಿಯೋ ವೈರಲ್

ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಬರಮಾಡಿಕೊಳ್ಳುವಾಗ ಕರ್ತವ್ಯಪಥದಲ್ಲಿ ಬಿದ್ದಿದ್ದ ಕಸವನ್ನು ಗಮನಿಸಿದ ಪ್ರಧಾನಿ ಮೋದಿ, ನಂತರ ಅದನ್ನು ಎತ್ತಿದ್ದು, ಭದ್ರತಾ ಪಡೆ ಕೈಗೆ ನೀಡಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ನವದೆಹಲಿ: 76 ನೇ ಗಣರಾಜ್ಯೋತ್ಸವದ ಪರೇಡ್ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯ ಪಥದಲ್ಲಿ ಬಿದ್ದಿದ್ದ ಕಸವನ್ನು ಎತ್ತುವ ಮೂಲಕ ಗಮನ ಸೆಳೆದರು. ಈ ಮೂಲಕ ತಮ್ಮ ನಡೆಯಿಂದಲೇ ಸ್ವಚ್ಛ ಭಾರತ ಅಭಿಯಾನದ ಮಹತ್ವವನ್ನು ಸಾರಿದ್ದಾರೆ. ರಾಷ್ಟ್ರದ ಜನರಲ್ಲಿ ಸ್ವಚ್ಛತೆ ಕುರಿತು ಜನರಲ್ಲಿ ಅರಿವು ಮೂಡಿಸಿದ್ದಾರೆ.

ಹೌದು. ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಬರಮಾಡಿಕೊಳ್ಳುವಾಗ ಕರ್ತವ್ಯಪಥದಲ್ಲಿ ಬಿದ್ದಿದ್ದ ಕಸವನ್ನು ಗಮನಿಸಿದ ಪ್ರಧಾನಿ ಮೋದಿ, ನಂತರ ಅದನ್ನು ಎತ್ತಿದ್ದು, ಭದ್ರತಾ ಪಡೆ ಕೈಗೆ ನೀಡಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಪ್ರಧಾನಿ ಮೋದಿಯ ಸ್ವಚ್ಚ ಭಾರತ ನಡೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮೋದಿ ಸ್ವಚ್ಚ ಭಾರತದ ರಾಯಭಾರಿ ಎಂದು ಹಲವರು ಶ್ಲಾಘಿಸಿದ್ದಾರೆ. ಮೋದಿಯ ಈ ನಡೆ ದೇಶಕ್ಕೆ ನೀಡಿದ ಸಂದೇಶವಾಗಿದೆ.

ಸ್ವಚ್ಚತೆಯ ಅಭಿಯಾನದಲ್ಲಿ ಮೋದಿಯ ಈ ಸಂದೇಶ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2014ರ ಅಕ್ಟೋಬರ್ 2ರಂದು ಸ್ವಚ್ಛ ಭಾರತ ಅಭಿಯಾನಕ್ಕೆ ರಾಜಪಥದಲ್ಲಿ ಚಾಲನೆ ನೀಡಿದ ಬಳಿಕ ಸ್ವಚ್ಛ ಭಾರತ ಅಭಿಯಾನವನ್ನು ದೇಶದ ಉದ್ದಗಲಕ್ಕೂ ರಾಷ್ಟ್ರೀಯ ಚಳವಳಿ ರೂಪದಲ್ಲಿ ಜಾರಿಗೆ ತರಲಾಗುತ್ತಿದೆ.

ಪ್ರಧಾನಿ ಮೋದಿ ಸಾಕಷ್ಟು ವೇದಿಕೆ, ಸಾಮಾಜಿಕ ಮಾಧ್ಯಮ, ಮನ್ ಕೀ ಬಾತ್ ಸೇರಿದಂತೆ ಹಲವೆಡೆ ನಿರಂತರವಾಗಿ ಸ್ವಚ್ಛತೆ ಕುರಿತು ಪ್ರತಿಪಾದಿಸುತ್ತಿರುತ್ತಾರೆ. ಸ್ವಚ್ಛ ಭಾರತ ಗುರಿಯೊಂದಿಗೆ ತಮ್ಮ ಮಾತು, ಸಂದೇಶ ಮತ್ತು ಕೃತಿಯ ಮೂಲಕ ಸ್ವಚ್ಛ ಭಾರತದ ಸಂದೇಶವನ್ನು ಜನರಿಗೆ ತಲುಪಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!