ಕರ್ತವ್ಯಪಥದಲ್ಲಿ ನಡೆಯುತ್ತಿರುವ ಪರೇಡ್  
ದೇಶ

76ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಸಾಥ್‌ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು. ರಾಜಪಥ್‌ ಕರ್ತವ್ಯಪಥ ಎಂದು ಮರುನಾಮಕರಣಗೊಂಡ ಬಳಿಕ ನಡೆಯುತ್ತಿರುವ 3ನೇ ಗಣರಾಜ್ಯೋತ್ಸವ ಇದಾಗಿದ್ದು, ಪರೇಡ್‌ ಮೂಲಕ ವಿಶ್ವದ ಮುಂದೆ ದೇಶದ ಶಕ್ತಿ ಕರ್ತವ್ಯಪಥದಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಲಾಗುತ್ತಿದೆ.

ಈ ಬಾರಿಯ ಗಣರಾಜ್ಯೋತ್ಸವ ಜನ್ ಭಾಗಿದರಿ (ಜನರ ಭಾಗವಹಿಸುವಿಕೆ) ವಿಷಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಸಾವಿರಾರು ಜನಸಾಮಾನ್ಯರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದು, 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ.

ಸಮಾರಂಭದ ಮುಖ್ಯ ಮೆರವಣಿಗೆ ಬೆಳಿಗ್ಗೆ 10.30ಕ್ಕೆ ಆರಂಭವಾಗಿದ್ದು, ವಿಜಯ್ ಚೌಕ್ ನಲ್ಲಿ ಪ್ರಾರಂಭವಾಗಿ, ಕರ್ತವ್ಯ ಪಥದಲ್ಲಿ ಮುಂದುವರೆದಿದೆ. ಬಳಿಕ ಇಂಡಿಯಾ ಗೇಟ್ ಮೂಲಕ ಹಾದುಹಾಗಿ, ಕೆಂಪುಕೋಟೆಯಲ್ಲಿ ಮುಕ್ತಾಯಗೊಳ್ಳಲಿದೆ.

ಈ ಬಾರಿಯ ಪರೇಡ್ ನ ವಿಷಯವೆಂದರೆ ಸ್ವರ್ಣಿಮ್ ಭಾರತ್: ವಿರಾಸತ್ ಔರ್ ವಿಕಾಸ್ (ಸುವರ್ಣ ಭಾರತ; ಪರಂಪರೆ ಮತ್ತು ಅಭಿವೃದ್ಧಿ). ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳು ಪೂರ್ಣಗೊಂಡ ನಿಮಿತ್ತ ಈ ಹೆಸರಿಡಲಾಗಿದೆ.

ಈ ಬಾರಿ ಕರ್ನಾಟಕ ಸೇರಿ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಿದ್ದು, ಒಟ್ಟು 31 ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯುತ್ತಿದೆ.

ಸೇನಾ ಪರೇಡ್ ನಲ್ಲಿ ಇಬ್ಬರು ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರು, ಕಾರ್ಗಿರ್ ಯುದ್ಧ ವೀರರು ಹಾಗೂ ಒಬ್ಬ ಅಶೋಕ ಚಕ್ರ ಪುರಸ್ಕೃತರು ಪರೇಡ್ ನಲ್ಲಿ ಭಾಗಿಯಾಗಿದ್ದಾರೆ.

130ಜೆ ಸೂಪರ್ ಹರ್ಕ'ಯುಲಸ್, ಸಿ-275, ಸಿ-17 ಗ್ರೋಬ್ ಮಾಸ್ಟರ್, ಪಿ-8ಐ, ಮಿಗ್-29 ಮತ್ತು ಸುಖೋಯ್-30, ಇತರ ವಿಮಾನಗಳ ಪ್ರದರ್ಶನ ನಡೆಯುತ್ತಿಪೆ. ಫ್ಲೈಪಾಸ್ಟ್ ನಲ್ಲಿ ವಾಯುಪಡೆಯ 40 ವಿಮಾನಗಲು ಮತ್ತು 3 ಡಾರ್ನಿಯರ್ ವಿಮಾನಗಳು ಭಾಗಿಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!