ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಶ್ರೀಲಂಕಾ ನೌಕಪಡೆಯಿಂದ ಮೂರು ಭಾರತೀಯ ಮೀನುಗಾರಿಕೆ ದೋಣಿ ವಶಕ್ಕೆ, 34 ಮಂದಿ ಬಂಧನ!

ದೋಣಿಗಳು ಮತ್ತು ಬಂಧಿತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ ಇರನತೀವುಗೆ ಕರೆದೊಯ್ಯಲಾಯಿತು.

ರಾಮನಾಥಪುರ: ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ 34 ಭಾರತೀಯ ಮೀನುಗಾರರನ್ನು ಒಳಗೊಂಡ ಮೂರು ಭಾರತೀಯ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ಭಾನುವಾರ ನಸುಕಿನಲ್ಲಿ ವಶಪಡಿಸಿಕೊಂಡಿದೆ.

ದೋಣಿಗಳು ಮತ್ತು ಬಂಧಿತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ ಇರನತೀವುಗೆ ಕರೆದೊಯ್ಯಲಾಯಿತು. ನಂತರ, ಅವುಗಳನ್ನು ಕಾನೂನು ಕ್ರಮಗಳಿಗಾಗಿ ಕಿಲಿನೊಚ್ಚಿಯ ಸಹಾಯಕ ಮೀನುಗಾರಿಕೆ ನಿರ್ದೇಶನಾಲಯಕ್ಕೆ ಹಸ್ತಾಂತರಿಸಲಾಗಿದೆ.

ಮೀನುಗಾರಿಕೆ ಇಲಾಖೆ ಪ್ರಕಾರ, ರಾಮೇಶ್ವರಂನಿಂದ 400 ಕ್ಕೂ ಹೆಚ್ಚು ದೋಣಿಗಳು ಶನಿವಾರ ಸಮುದ್ರಕ್ಕೆ ಇಳಿದಿದ್ದು, ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ಮೇಲೆ ಭಾರತೀಯ ದೋಣಿಗಳು ಮೀನುಗಾರಿಕೆ ನಡೆಸುತ್ತಿದ್ದಾಗ ಕೆಲವು ದೋಣಿಗಳು ಶ್ರೀಲಂಕಾದ ನೀರನ್ನು ಪ್ರವೇಶಿಸಿವೆ ಎಂದು ಹೇಳಲಾಗಿದೆ.

ವರದಿಗಳ ಪ್ರಕಾರ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘನೆಗಾಗಿ 2025ರಲ್ಲಿ ಇಲ್ಲಿಯವರೆಗೂ 6 ಭಾರತೀಯ ಮೀನುಗಾರಿಕೆ ದೋಣಿಗಳನ್ನು ಶ್ರೀಲಂಕಾ ನೌಕಪಡೆ ವಶಕ್ಕೆ ಪಡೆದಿದ್ದು, 52 ಭಾರತೀಯ ಮೀನುಗಾರರನ್ನು ಬಂಧಿಸಿದೆ.

ನಿರಂತರವಾಗಿ ಬಂಧಿಸುತ್ತಿರುವುದನ್ನು ಮೀನುಗಾರರ ಸಂಘ ಖಂಡಿಸಿದ್ದು, ಯಾವುದೇ ದಂಡ ಇಲ್ಲದೆ ಮೀನುಗಾರರ ಬಿಡುಗಡೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ವಶಕ್ಕೆ ಪಡೆಯಲಾದ ಬೋಟ್ ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT