ಕೈಲಾಸ ಮಾನಸ ಸರೋವರ 
ದೇಶ

ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಿಸಲು ಭಾರತ, ಚೀನಾ ಒಪ್ಪಿಗೆ

2025 ರ ಬೇಸಿಗೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ.

ನವದೆಹಲಿ: ಡೋಕ್ಲಾಮ್ ಸಂಘರ್ಷದ ನಂತರ ನಿಲ್ಲಿಸಲಾಗಿದ್ದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜನವರಿ 26-27 ರಂದು ಬೀಜಿಂಗ್‌ಗೆ ಭೇಟಿ ನೀಡಿ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿ-ಉಪ ವಿದೇಶಾಂಗ ಸಚಿವರ ಕಾರ್ಯವಿಧಾನ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಭಾರತ ಮತ್ತು ಚೀನಾ ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿವೆ.

ಅಕ್ಟೋಬರ್‌ನಲ್ಲಿ ಕಜಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ಮಾಡಿಕೊಂಡ ಒಪ್ಪಂದಗಳಿಗೆ ಅನುಗುಣವಾಗಿ ನಡೆದ ಈ ಸಭೆಯಲ್ಲಿ, ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲು ಎರಡೂ ಕಡೆಯವರು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

MEA ಯ ಅಧಿಕೃತ ಪ್ರಕಟಣೆಯ ಪ್ರಕಾರ, ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ನಿರ್ಧಾರವೆಂದರೆ 2025 ರ ಬೇಸಿಗೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ.

ಕೈಲಾಸ ಮಾನಸ ಸರೋವರವು ಟಿಬೆಟ್ ಪ್ರದೇಶದಲ್ಲಿದೆ. ಈ ಪ್ರಯಾಣವನ್ನು ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದೆ, ಈಗ ಅದನ್ನು ಪುನರಾರಂಭಿಸಲು ಒಪ್ಪಿಗೆ ನೀಡಲಾಗಿದೆ. ಇದಲ್ಲದೆ, ಪರಸ್ಪರರ ದೇಶದಿಂದ ಹರಿಯುವ ನದಿಗಳ ಸಹಕಾರವನ್ನು ಹೆಚ್ಚಿಸಲು ಮತ್ತು ಗಡಿ ವ್ಯಾಪಾರಕ್ಕಾಗಿ ನಾಥುಲಾವನ್ನು ತೆರೆಯಲು ಎರಡೂ ದೇಶಗಳು ಸಹ ಒಪ್ಪಿಕೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT