ಸ್ಯಾಮ್ ಪಿತ್ರೋಡಾ-ರಾಹುಲ್ ಗಾಂಧಿ 
ದೇಶ

ಸ್ವಲ್ಪ ಕಷ್ಟ ಆದರೂ... ಬಾಂಗ್ಲಾದ ಅಕ್ರಮ ವಲಸಿಗರಿಗೂ ಭಾರತ ನೆಲೆ ಕಲ್ಪಿಸಬೇಕು: ರಾಹುಲ್ ಮೆಂಟರ್ ಸ್ಯಾಮ್ ಪಿತ್ರೋಡಾ ವಿವಾದ!

ಬಾಂಗ್ಲಾದೇಶಿಗರು ಇಲ್ಲಿಗೆ ಬರಲು ಬಯಸಿದರೆ, ಅಕ್ರಮವಾಗಿಯಾದರೂ, ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ನಮಗೆ ಅದರಿಂದ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ. ಸಹಿಸಿಕೊಳ್ಳಬೇಕು ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ನವದೆಹಲಿ: ಬಾಂಗ್ಲಾದೇಶಿ ವಲಸಿಗರು ಒಂದು ವೇಳೆ ಭಾರತಕ್ಕೆ ಬರಲು ಬಯಸಿದರೆ, ಅದು ಅಕ್ರಮವಾಗಿದ್ದರೂ ಸಹ ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು ಎಂದು ಹೇಳುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಪ್ತ ಸಹಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ನಡುವೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಈ ಹೇಳಿಕೆ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಾಂಗ್ಲಾದೇಶಿಗರು ಇಲ್ಲಿಗೆ ಬರಲು ಬಯಸಿದರೆ, ಅಕ್ರಮವಾಗಿಯಾದರೂ, ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ನಮಗೆ ಅದರಿಂದ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ, ಸಹಿಸಿಕೊಳ್ಳಬೇಕು ಎಂದು ಹೇಳುವ ಮೂಲಕ ವಲಸಿಗರು ಭಾರತದಲ್ಲಿ ನೆಲೆಸಬೇಕೆಂದು ಪ್ರತಿಪಾದಿಸಿದ್ದು ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರದ ಕಠಿಣ ಕ್ರಮವನ್ನು ಟೀಕಿಸಿದ ಪಿತ್ರೋಡಾ, ಸರ್ಕಾರವು ವಲಸೆಯನ್ನು ನಿಭಾಯಿಸುವ ಬದಲು ಜಾಗತಿಕ ತಾಪಮಾನದ ಏರಿಕೆಯಂತಹ ಸಾರ್ವಜನಿಕರಿಗೆ ಮುಖ್ಯವಾದ ಸಮಸ್ಯೆಗಳನ್ನು ಪರಿಹರಿಸುವತ್ತ ಹೆಚ್ಚು ಗಮನಹರಿಸಬೇಕು ಎಂದು ಒತ್ತಿ ಹೇಳಿದ್ದಾರೆ.

ಫೆಬ್ರವರಿ 5ರ ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಸ್ಯಾಮ್ ಪಿತ್ರೋಡಾರ ಈ ಹೇಳಿಕೆ ರಾಜಕೀಯ ಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ. ಆಡಳಿತಾರೂಢ ಎಎಪಿ ಬಾಂಗ್ಲಾದೇಶಿ ನುಸುಳುಕೋರರಿಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸುವಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಆರೋಪಿಸಿದ್ದು ದೆಹಲಿಯ ಆಡಳಿತ ಪಕ್ಷವು ಮುಂಬರುವ ಚುನಾವಣೆಗಳಿಗೆ ಅವರನ್ನು "ಮತ ಬ್ಯಾಂಕ್" ಆಗಿ ಬಳಸುತ್ತಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?