ಎ. ರಾಜಾ 
ದೇಶ

ವಕ್ಫ್ ತಿದ್ದುಪಡಿ ಮಸೂದೆಗೆ ಜೆಪಿಸಿಯ ಅಂಗೀಕಾರ: ಸುಪ್ರೀಂ ಕೋರ್ಟ್‌ ಗೆ ಹೋಗ್ತೀವಿ- ಎ.ರಾಜಾ

ವಿರೋಧ ಪಕ್ಷದ ಸದಸ್ಯರು 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ.

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಸತ್ತಿನ ಜಂಟಿ ಸಮಿತಿ (JPC)ಸೋಮವಾರ ಅನುಮೋದನೆ ನೀಡಿದೆ. ಆಡಳಿತಾರೂಢ ಬಿಜೆಪಿಯ ಜಗದಾಂಬಿಕಾ ಪಾಲ್ ನೇತೃತ್ವದಲ್ಲಿ ನಡೆದ ಸಮಿತಿಯಲ್ಲಿ 14 ತಿದ್ದುಪಡಿಗಳೊಂದಿಗೆ ಮಸೂದೆಯನ್ನು ಅಂಗೀಕರಿಸಲಾಯಿತು.

ವಿರೋಧ ಪಕ್ಷದ ಸದಸ್ಯರು 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ. ಪ್ರಸ್ತಾವಿತ ಮಸೂದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಜೆಪಿಸಿಯ ಸದಸ್ಯರಲ್ಲಿ ಒಬ್ಬರಾಗಿರುವ ಡಿಎಂಕೆ ಸಂಸದ ಎ.ರಾಜಾ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎ. ರಾಜಾ, ಖಂಡಿತವಾಗಿಯೂ ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ. ಡಿಎಂಕೆ, ನಾನೇ ಅರ್ಜಿ ಸಲ್ಲಿಸುತ್ತೇನೆ. ಪ್ರಸ್ತಾವಿತ ಕಾನೂನು ಅಸಂವಿಧಾನಿಕವಾಗಿದ್ದು, ಅದರ ವಿರುದ್ಧ ತಮ್ಮ ಪಕ್ಷ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದೆ ಎಂದು ಹೇಳಿದರು.

ಸಮಿತಿಯಲ್ಲಿ ಸಲ್ಲಿಸಿದ ದಾಖಲೆಗಳು ಮತ್ತು ಅಂಶಗಳು ಮುಂದೆ ಕಾನೂನು ಹೋರಾಟದಲ್ಲಿ ಪ್ರಯೋಜನಕಾರಿಯಾಗಲಿವೆ. ಜಗದಾಂಬಿಕಾ ಪಾಲ್ ನಡವಳಿಗಳನ್ನು ಅಪಹಾಸ್ಯ ಮಾಡಿದ್ದಾರೆ. ವರದಿ ಈಗಾಗಲೇ ಸಿದ್ಧವಾಗಿದೆ ಅನಿಸುತ್ತಿದೆ ಎಂದು ತಿಳಿಸಿದರು.

ವಿರೋಧ ಪಕ್ಷಗಳ ತಿದ್ದುಪಡಿಗಳನ್ನು ಪಾಲ್ ಅವರೇ ಮಂಡಿಸಿದರು. ನಂತರ ಅವರೇ ಸಭೆಯಲ್ಲಿ ಹಾಜರಿದ್ದ ಸದಸ್ಯರನ್ನು ಎಣಿಸಿ, ಅನುಮೋದನೆಯಾಗಿದೆ ಎಂದು ತಿಳಿಸಿದ್ದಾರೆ. ಪ್ರತಿಪಕ್ಷಗಳಿಗೆ ನೀಡಿದ ಭರವಸೆಯಂತೆ ಯಾವುದೇ ದಾಖಲೆಗಳನ್ನು ನೀಡಲಿಲ್ಲ ಎಂದು ಆರೋಪಿಸಿದರು.

ಸಮಿತಿ ತನ್ನ ವರದಿಯನ್ನು ಅಂಗೀಕರಿಸಲು ಬುಧವಾರ ಕೊನೆಯ ಬಾರಿಗೆ ಸಭೆ ಸೇರಲಿದ್ದು, ಜನವರಿ 31 ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದ ನಂತರ ಸರ್ಕಾರ ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT