ಮಹಾಕುಂಭ ಮೇಳ 
ದೇಶ

ಮಹಾಕುಂಭ ಮೇಳ: ಇಲ್ಲಿಯವರೆಗೆ 147.6 ಮಿಲಿಯನ್ ಜನರಿಂದ ಪವಿತ್ರ ಸ್ನಾನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭ ಮೇಳ ಗಮನಾರ್ಹ ರೀತಿಯಲ್ಲಿ ಭಕ್ತರನ್ನು ಆಕರ್ಷಿಸುತ್ತಿದ್ದು, ಸಂಗಮದಲ್ಲಿ ಪ್ರತಿನಿತ್ಯ ಸಾವಿರಾರು ಜನರು ಪವಿತ್ರ ಸ್ನಾನ ಮಾಡುತ್ತಿದ್ದಾರೆ.

ಮಂಗಳವಾರ ಬೆಳಿಗ್ಗೆ 8 ಗಂಟೆಯ ಹೊತ್ತಿಗೆ 1 ಮಿಲಿಯನ್ ಸಾಧು ಸಂತರು ಸೇರಿದಂತೆ 4.55 ಮಿಲಿಯನ್ ಜನರು ಗಂಗಾ ಮತ್ತು ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಮಾಹಿತಿ ಇಲಾಖೆ ತಿಳಿಸಿದೆ.

ಈ ಮಧ್ಯೆ ಉತ್ತರ ಪ್ರದೇಶ ಮಾಹಿತಿ ಇಲಾಖೆ ಪ್ರಕಾರ, ಜನವರಿ 13 ರಂದು ಈವೆಂಟ್ ಪ್ರಾರಂಭವಾದಾಗಿನಿಂದ 147.6 ಮಿಲಿಯನ್ ಜನರು ಗಂಗಾ ಮತ್ತು ಯಮುನಾ ನದಿಗಳ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಇಲ್ಲಿಯವರೆಗೆ ರಾಜನಾಥ್ ಸಿಂಗ್ ಮತ್ತು ಕಿರಣ್ ರಿಜಿಜು ಸೇರಿದಂತೆ ಹಲವಾರು ಕೇಂದ್ರ ಸಚಿವರು ಮಹಾಕುಂಭಕ್ಕೆ ಭೇಟಿ ನೀಡಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಶಾ ಅವರೊಂದಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಾಬಾ ರಾಮ್ ದೇವ್ ಮತ್ತಿತರ ಸಾಧು ಸಂತರು ಸ್ನಾನ ಮಾಡುವುದರೊಂದಿಗೆ ಮಹಾಕುಂಭ ಮೇಳ ಪ್ರಪಂಚದಾದ್ಯಂತ ಅಸಾಧಾರಣ ಭಕ್ತರ ಆಗಮನಕ್ಕೆ ಸಾಕ್ಷಿಯಾಗಿದೆ.

ಇಟಲಿಯ ಯಾತ್ರಿಕ ಆಂಟೋನಿಯೊ ಕುಂಭಮೇಳದಲ್ಲಿ ಪಾಲ್ಗೊಳ್ಳುವ ತಮ್ಮ ದಶಕದ ಕನಸು ಅಂತಿಮವಾಗಿ ಈಡೇರಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT