ಸೈಫ್ ಅಲಿ ಖಾನ್-ಆಕಾಶ್ ಕನೋಜಿಯ PTI
ದೇಶ

'ನನ್ನ ಮಗನ ಜೀವನ ಹಾಳಾಯಿತು': ಸೈಫ್ ಅಲಿ ಖಾನ್ ದಾಳಿ ಪ್ರಕರಣದಲ್ಲಿ ಬಂಧಿತನಾಗಿದ್ದ ಶಂಕಿತನ ತಂದೆ ಅಳಲು

ಮುಂಬೈ ಪೊಲೀಸರ ಸುಳಿವಿನ ಮೇರೆಗೆ ರೈಲ್ವೆ ಸಂರಕ್ಷಣಾ ಪಡೆ ಜನವರಿ 18ರಂದು ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಸ್-ಕೋಲ್ಕತ್ತಾ ಶಾಲಿಮಾರ್ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಿಂದ ದುರ್ಗ್ ನಿಲ್ದಾಣದಲ್ಲಿ ಚಾಲಕ ಆಕಾಶ್ ಕನೋಜಿಯಾ (31) ಎಂಬುವವರನ್ನು ಬಂಧಿಸಿತ್ತು.

ಥಾಣೆ: ಜನವರಿ 16ರಂದು ನಡೆದ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ಚಾಕು ಇರಿತ ಪ್ರಕರಣದಲ್ಲಿ ಶಂಕಿತ ಆರೋಪಿಯಾಗಿ ಛತ್ತೀಸ್‌ಗಢದ ದುರ್ಗ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯ ತಂದೆ ಸೋಮವಾರ ಮುಂಬೈ ಪೊಲೀಸರಿಂದ 'ನನ್ನ ಮಗನ ಜೀವನ ಹಾಳಾಗಿದೆ' ಎಂದು ಟೀಕಿಸಿದ್ದಾರೆ.

ಮುಂಬೈ ಪೊಲೀಸರ ಸುಳಿವಿನ ಮೇರೆಗೆ ರೈಲ್ವೆ ಸಂರಕ್ಷಣಾ ಪಡೆ ಜನವರಿ 18ರಂದು ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಸ್-ಕೋಲ್ಕತ್ತಾ ಶಾಲಿಮಾರ್ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಿಂದ ದುರ್ಗ್ ನಿಲ್ದಾಣದಲ್ಲಿ ಚಾಲಕ ಆಕಾಶ್ ಕನೋಜಿಯಾ (31) ಎಂಬುವವರನ್ನು ಬಂಧಿಸಿತ್ತು.

ಜನವರಿ 19ರ ಬೆಳಿಗ್ಗೆ ಮುಂಬೈ ಪೊಲೀಸರು ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ಅಲಿಯಾಸ್ ವಿಜಯ್ ದಾಸ್ ಎಂಬಾತನನ್ನು ಥಾಣೆಯಲ್ಲಿ ಬಂಧಿಸಿದ್ದರು. ಅದಾದ ಬಳಿಕ ದುರ್ಗ್ ಆರ್‌ಪಿಎಫ್ ಕನೋಜಿಯಾ ಅವರನ್ನು ಬಿಡುಗಡೆ ಮಾಡಿತ್ತು.

ಕನೋಜಿಯಾ ಅವರು ಥಾಣೆ ಜಿಲ್ಲೆಯ ಟಿಟ್ವಾಲಾದ ಇಂದಿರಾನಗರ ಚಾಲ್ ನಿವಾಸಿಯಾಗಿದ್ದಾರೆ.

'ಪೊಲೀಸರು ನನ್ನ ಮಗನ ಗುರುತನ್ನು ಪರಿಶೀಲಿಸದೆ ಬಂಧಿಸಿದ್ದಾರೆ. ಈ ತಪ್ಪು ಅವನ ಜೀವನವನ್ನು ಹಾಳುಮಾಡಿದೆ. ಮಾನಸಿಕ ಆಘಾತದಿಂದಾಗಿ, ಆಕಾಶ್ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಅಥವಾ ಕುಟುಂಬದೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ಆತ ಎಲ್ಲರಿಂದ ಹಿಂದೆ ಸರಿಯುತ್ತಿದ್ದಾನೆ, ಸರಿಯಾಗಿ ಮಾತನಾಡುತ್ತಿಲ್ಲ ಮತ್ತು ಎಲ್ಲ ಪ್ರೇರಣೆಯನ್ನು ಕಳೆದುಕೊಂಡಿದ್ದಾನೆ' ಎಂದು ಅವರ ತಂದೆ ಕೈಲಾಶ್ ಕನೋಜಿಯಾ ಹೇಳಿದ್ದಾರೆ.

'ನನ್ನ ಮಗ ಮತ್ತು ನಿಜವಾದ ಆರೋಪಿಯ ನಡುವೆ ಯಾವುದೇ ಸಾಮ್ಯತೆ ಇಲ್ಲ ಎಂದು ಜನರು ಹೇಳುತ್ತಿದ್ದಾರೆ. ಆತ ಕೆಲಸ ಕಳೆದುಕೊಂಡನು ಮತ್ತು ಮದುವೆ ರದ್ದಾಯಿತು. ಇದಕ್ಕೆಲ್ಲಾ ಯಾರು ಹೊಣೆ? ಪೊಲೀಸರ ವರ್ತನೆಯು ಆಕಾಶ್‌ನ ಭವಿಷ್ಯವನ್ನು ನಾಶಪಡಿಸಿದೆ' ಎಂದು ದೂರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT